ನ.2 : ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ಅಶೋಕ ಜನ-ಮನ-2024’ ವಸ್ತ್ರ ವಿತರಣಾ ಕಾರ್ಯಕ್ರಮ | ಚಪ್ಪರ ಮುಹೂರ್ತ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನ.2 ರಂದು ದೀಪಾವಳಿ ಪ್ರಯುಕ್ತ ವಸ್ತ್ರ ವಿತರಣೆ ಅಂಗವಾಗಿ ನಡೆಯಲಿರುವ ‘ಅಶೋಕ ಜನ-ಮನ-2024’ ಕಾರ್ಯಕ್ರಮದ ಚಪ್ಪರ ಮುಹೂರ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಸೋಮವಾರ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ, ದೀಪಾವಳಿಯಂದು ಪ್ರತೀ ವರ್ಷ ನಡೆಯುವಂತೆ ಈ ಬಾರಿ 12ನೇ ವರ್ಷದ ವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಲಿದೆ. ಕಳೆದ ಕೆಲವು ವರ್ಷಗಳಿಂದ ಕೋಡಿಂಬಾಡಿಯಲ್ಲಿರುವ ನಮ್ಮ ಮನೆಯಲ್ಲಿ ನಡೆಯುತ್ತಿತ್ತು. ಕಳೆದ ಮೂರು ವರ್ಷಗಳಿಂದ ಪುತ್ತೂರು ನಗರದಲ್ಲಿ ಮಾಡುತ್ತಿದ್ದೇವೆ. ಈ ಬಾರಿ ಸುಮಾರು 75 ಸಾವಿರ ಮಂದಿಗೆ ವಸ್ತ್ರ ವಿತರಣೆ ಹಮ್ಮಿಕೊಳ್ಳಲಾಗಿದೆ. ಅಲ್ಲದೆ ಗೂಡುದೀಪ ಸ್ಪರ್ಧೆಯನ್ನು ಆಯೋಜಿಸಿದ್ದೇವೆ. ಕಳೆದ ಬಾರಿ ಸುಮಾರು 400 ರಿಂದ 500 ಮಂದಿ ಗೂಡುದೀಪ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜನ-ಮನ ಕಾರ್ಯಕ್ರಮದ ಬಗ್ಗೆ ಸೋನಿಕಾ ಜನಾರ್ದನ್ ಮತ್ತು ಅಸ್ಮಿತ್ ಎ.ಜೆ. ಮಂಗಳೂರು ಅವರು ಹಾಡಿರುವ ಆಲ್ಬಂ ಸಾಂಗನ್ನು ಶಾಸಕರು ಬಿಡುಗಡೆ ಮಾಡಿದರು

































 
 

ಕಾರ್ಯಕ್ರಮದಲ್ಲಿ ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್‍ಶೆಟ್ಟಿ, ನಿಹಾಲ್‍ ಶೆಟ್ಟಿ, ಮುಖಂಡರಾದ ಕಾವು ಹೇಮನಾಥ ಶೆಟ್ಟಿ, ಅನಿತಾ ಹೇಮನಾಥ ಶೆಟ್ಟಿ ನಿರಂಜನ್ ರೈ ಮಠಂತಬೆಟ್ಟು, ಕೃಷ್ಣಪ್ರಸಾದ್ ಆಳ್ವ, ಮಹಮ್ಮದ್ ಬಡಗನ್ನೂರು ಮತ್ತಿತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top