ಕೇರ್ಪಡ ದಲ್ಲಿ ಹಿಂದೂ ಧಾರ್ಮಿಕ  ಶಿಕ್ಷಣ ಪ್ರಾರಂಭ

ಕಡಬ: ಕೇರ್ಪಡ ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರದ ವತಿಯಿಂದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಧಾರ್ಮಿಕ ಶಿಕ್ಷಣ ತರಗತಿಯನ್ನು ಆರಂಭಿಸಲಾಯಿತು.

ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ ಪ್ರಮುಖ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ  ಕೇಶವಪ್ರಸಾದ್ ಮುಳಿಯ ಹಾಗೂ ಮುರಳೀಕೃಷ್ಣ ಹಸಂತಡ್ಕ ಅವರ ಮಾರ್ಗದರ್ಶನದಲ್ಲಿ ಆರಂಭಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಕೃಷ್ಣವೇಣಿ ಪ್ರಸಾದ್ ಮುಳಿಯ ದೀಪ ಪ್ರಜ್ವಲನೆಗೊಳಿಸಿ ಕಥೆ, ಭಜನೆ ಹಾಗೂ ವಿವಿಧ ಚಟುವಟಿಕೆಗಳ ಮೂಲಕ 100 ಕ್ಕೂ ಮಿಕ್ಕಿ ನೋಂದಾಯಿತ ವಿದ್ಯಾರ್ಥಿಗಳಿಗೆ ತರಗತಿ ನಡೆಸಿ ಮಾಹಿತಿ ನೀಡಿದರು.

































 
 

ಇನ್ನೋರ್ವ ಸಂಪನ್ಮೂಲ ವ್ಯಕ್ತಿ ವೀಣಾ ಬಾಲಕೃಷ್ಣ, ಧಾರ್ಮಿಕ ಶಿಕ್ಷಣದ ಮಾಹಿತಿ ಹಾಗೂ ತಮ್ಮ ಕೇಂದ್ರದ ಮುಖೇನ ಬಿಡುಗಡೆಗೊಳಿಸಿರುವ ಧಾರ್ಮಿಕ ಪಠ್ಯಪುಸ್ತಕ ಕುರಿತಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಕೇರ್ಪಡ ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರದ ಸಂಚಾಲಕ ವಸಂತ ನಡುಬೈಲು , ಗೌರವಾಧ್ಯಕ್ಷರಾದ ಐತ್ತಪ್ಪ ಅಲೆಕ್ಕಾಡಿ, ವಸಂತ ಹುದೇರಿ, ಅಧ್ಯಕ್ಷ ಧ್ರುವಕುಮಾರ್ ಕೇರ್ಪಡ , ಶ್ರೀ ಕೇತ್ರ ಕೇರ್ಪಡದ ವ್ಯವಸ್ಥಾಪನಾ ಸಮಿತಿಯ ಸದಸ್ಯ ರೂಪರಾಜ ರೈ , ಕೇಂದ್ರದ ಸಂಪನ್ಮೂಲ ವ್ಯಕ್ತಿ ಸುಹಾಸ್ ಅಲೆಕ್ಕಾಡಿ, ನಿಂತಿಕಲ್ಲು ವಲಯ ಭಜನಾ ಪರಿಷತ್ ಅಧ್ಯಕ್ಷ ಪದ್ಮನಾಭ ಪೂದೆ, ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top