ವಿಶ್ವ ಹಿಂದೂ ಪರಿಷತ್ ನೂತನ ಕಾರ್ಯಾಲಯದ ಭೂಮಿ ಪೂಜೆ ಸಂದರ್ಭ ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ಮಾರಾಮಾರಿ | ಘಟನಾ ಸ್ಥಳದಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್

ಪುತ್ತೂರು: ವಿಶ್ವಹಿಂದೂ ಪರಿಷತ್ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಸಮಾರಂಭದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಕುರಿತು ತಿಳಿದು ಬಂದಿದೆ.

ಇಂದು ಪುತ್ತೂರಿನಲ್ಲಿ ವಿಶ್ವ ಹಿಂದೂ ಪರಿಷತ್‍ ನೂತನ ಕಾರ್ಯಾಲಯಕ್ಕೆ ಭೂಮಿ ಪೂಜೆ ಏರ್ಪಿಸಲಾಗಿತ್ತು. ಭೂಮಿ ಪೂಜೆಯನ್ನು ಕುಕ್ಕೆ ಸುಬ್ರಹ್ಮಣ್ಯದ ನರಸಿಂಹಸ್ವಾಮಿ ಸಂಪುಟ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮ ಆರಂಭಗೊಳ್ಳುತ್ತಿದ್ದಂತೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರನಾಗಿ ಚುನಾವಣೆಗೆ ಸ್ಪರ್ಧಿಸಿ ಬಿಜೆಪಿ ಸೋಲಿಗೆ ಕಾರಣರಾದ ಅರುಣ್ ಕುಮಾರ್‍ ಪುತ್ತಿಲ ಸಹಿತ ಬೆಂಗಲಿಗರು ಎಂಟ್ರಿಯಾಗಿದೆ. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತು ಹಿಂದೂ ಜಾಗರಣೆ ವೇದಿಕೆಯ ಕೆಲ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ತನ್ನ ಕಾರಿನಿಂದ ಇಳಿಯುತ್ತಿದ್ದ ಬೆನ್ನಲ್ಲೆ ಪುತ್ತಿಲರನ್ನು ತಡೆದಿದ್ದಾರೆ. ಈ ವೇಳೆ ಪುತ್ತಿಲರ ಜತೆಗಿದ್ದ ಪುತ್ತೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ ಪುತ್ತಿಲ ನೆರವಿಗೆ ದಾವಿಸಿದ್ದು ಪುತ್ತಿಲರನ್ನು ತಡೆಯಲು ಯತ್ನಿಸುತ್ತಿದ್ದ ಕಾರ್ಯಕರ್ತರ ಜತೆ ವಾಗ್ವಾದ ನಡೆಸಿದ್ದಾರೆ. ಈ ಸಂದರ್ಭ ಹೊಯ್‍ ಕೈ ನಡೆದಿದೆ ಎನ್ನಲಾಗಿದೆ. ಹಿಂದೂ ಸಂಘಟನೆ ಕಾರ್ಯಕರ್ತರ ಗುಂಪಿನಲ್ಲಿ ದಿನೇಶ್ ಪಂಜಿಗೆ, ಶ್ರೀಧರ್ ತೆಂಕಿಲ, ಜಯಂತ್ ಬಲ್ನಾಡು, ಜಿತೇಶ್ ಬಲ್ನಾಡು, ಜಯಂತ್ ಕುಂಜೂರುಪಂಜ ಮುಂತಾದವರು ಇದ್ದರು ಎಂದು ತಿಳಿದು ಬಂದಿದೆ.

ಈ ಸಂದರ್ಭ ವಿಶ್ವ ಹಿಂದೂ ಪರಿಷತ್‌ ನ ಹಿರಿಯ ಮುಖಂಡ ಯು. ಪೂವಪ್ಪ ಅವರು ಸ್ಥಳಕ್ಕೆ ಆಗಮಿಸಿ ಗಲಾಟೆಯನ್ನು ನಿಯಂತ್ರಿಸಿ ಅರುಣ್ ಪುತ್ತಿಲರನ್ನು ಅವರ ಜತೆಗಿದ್ದ ಪುತ್ತೂರು ಬಿಜೆಪಿಯ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲ್, ಅನಿಲ್ ತೆಂಕಿಲರವರನ್ನು ಸಭಾಂಗಣಕ್ಕೆ ಕರೆದುಕೊಂಡು ಹೋಗಿದ್ದಾರೆ. ಘಟನೆಯ ಮಾಹಿತಿ ಪಡೆದ ಪುತ್ತೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಿಗಿ ಬಂದೋಬಸ್ತು ಏರ್ಪಡಿಸಿದ್ದಾರೆ.





































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top