ಕಬಡ್ಡಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ  ಚಿಕ್ಕಮಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಡೂರು ಹಾಗೂ ಕೇಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಪುರ, ಕಡೂರುನಲ್ಲಿ ನಡೆದ 17 ರ ವಯೋಮಾನದ ಬಾಲಕರ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.

ಶಾಲೆಯ ವಿದ್ಯಾರ್ಥಿಗಳಾದ ಪುನೀತ್, ಧನ್ವಿತ್, ಜಿ. ಶೇಖರ, ನರಸಪ್ಪ ತಳವಾರ್, ಚೈತನ್ ನಲವಾಡೆ, ಪ್ರೀತಮ್ ಮಳಿ, ಅಬೀಬ್ ವುಲ್ಲಾ ತಂಡವನ್ನು ಪ್ರತಿನಿಧಿಸಿದ್ದರು. ಅವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸತ್ಯನ್‌ ಗುತ್ತಿಗಾರು ತರಬೇತಿ ನೀಡಿದ್ದಾರೆ.

ವಿದ್ಯಾಭಾರತಿ ವತಿಯಿಂದ ಮಧ್ಯಪ್ರದೇಶದ ಆದ್ರಾದಲ್ಲಿ ನಡೆದ 17 ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ತೃತೀಯ ಸ್ಥಾನ ಪಡೆದಿರುತ್ತದೆ.





































 
 

ಶಾಲಾ ವಿದ್ಯಾರ್ಥಿನಿಯರಾದ ದೀಕ್ಷಿತಾ, ಬಿಂದುಶ್ರೀ, ವಿನ್ಯಾರೈ, ಸುಶಾ ಎಂ., ಲೋಚನಾ, ಅಂಕಿತಾ, ಅರ್ಚನಾ, ತನುಜಾ, ಗೋದಾವರಿ ತಂಡವನ್ನು ಪ್ರತಿನಿಧಿಸಿದ್ದರು. ಅವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಮನೋಹರ್‌ ತರಬೇತು ನೀಡಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top