24 ತುಂಡು ಮಾಡುತ್ತೇನೆ ಎಂದು ಹಿಂದೂ ಯುವತಿಗೆ ಬೆದರಿಕೆಯೊಡ್ಡಿದ ಆರೋಪಿ ಬಂಧನ

ಯುವತಿಯ ಅಂಗಡಿ ಎದುರು ಬಂದು ಕಿರುಕುಳ ನೀಡುತ್ತಿದ್ದ ಯುವಕರ ತಂಡ

ಮಂಗಳೂರು: ಸುರತ್ಕಲ್‌ನ ಹಿಂದು ಯುವತಿಗೆ ಕಿರುಕುಳ ನೀಡಿದ ಆರೋಪಿ ಸುರತ್ಕಲ್‌ ಗ್ರಾಮದ ಇಡ್ಯಾ ಗ್ರಾಮದ ಶಾರೀಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಿರಂತರ ಕಿರುಕುಳದಿಂದ ಬೇಸತ್ತು ಯುವತಿ ನಿನ್ನೆ ಮುಂಜಾನೆ ನಿದ್ದೆ ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಈ ಘಟನೆ ಬೆಳಕಿಗೆ ಬಂದಿತ್ತು. ಹಿಂದೂ ಸಂಘಟನೆಗಳು ಲವ್‌ ಜಿಹಾದ್‌ ಕೃತ್ಯ ಎಂದು ಆರೋಪಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಯುವತಿಗೆ ಬೆದರಿಕೆಯೊಡ್ಡುತ್ತಿದ್ದ ಆರೀಪಿಯ ನಂಬರ್‌ಗಳನ್ನು ಮತ್ತು ಸೋಷಿಯಲ್‌ ಮೀಡಿಯಾ ಖಾತೆಗಳನ್ನು ಯುವತಿ ಬ್ಲಾಕ್‌ ಮಾಡಿದ್ದಳು. ಬಳಿಕ ಆರೋಪಿ ಯುವತಿಯ ಫೇಸ್‌ಬುಕ್‌ ಖಾತೆಯನ್ನು ಹ್ಯಾಕ್‌ ಮಾಡಿ ಮೆಸೆಂಜರ್‌ ಮೂಲಕ ಆಕೆಯ ಅಣ್ಣನಿಗೆ ನಿನ್ನ ತಂಗಿಗೆ ನನ್ನನ್ನು ಪ್ರೀತಿಸಲು ಹೇಳು ಇಲ್ಲದಿದ್ದರೆ 24 ತುಂಡು ಮಾಡುತ್ತೇನೆ ಎಂದು ಬೆದರಿಕೆ ಸಂದೇಶ ಕಳುಹಿಸಿದ್ದ. ಇದರಿಂದ ಹೆದರಿದ ಯುವತಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಳು.
ಶಾರೀಕ್ ಮತ್ತು ಅವನ ತಾಯಿ ನೂರ್‌ಜಹಾನ್ ನೀಡುತ್ತಿರುವ ಕಿರುಕುಳದಿಂದ ಹೆದರಿ ಆತ್ಮಹತ್ಯೆಗೆ ತೀರ್ಮಾನಿಸಿರುವುದಾಗಿ ಪತ್ರ ಬರೆದು ನಿದ್ದೆ 10 ಮಾತ್ರೆ ಸೇವಿಸಿದ್ದಳು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.







































 
 

ಮಲಗಿದ್ದ ಮಗಳ ಬಳಿ ಪತ್ರ ದೊರಕಿದ್ದು, ಓದಿದಾಗ ಅನುಮಾನಗೊಂಡು ಎಚ್ಚರಿಸಲು ಯತ್ನಿಸಿದಾಗ, ಅರೆಪ್ರಜ್ಞಾವಸ್ಥೆಯಲ್ಲಿರುವುದನ್ನು ಕಂಡು ಮನೆ ಮಂದಿ ತತ್‌ಕ್ಷಣ ಸ್ಥಳೀಯ ಸಾಮಾಜಿಕ ಕಾರ್ಯಕರ್ತರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಿದರು. ಸಕಾಲದಲ್ಲಿ ಚಿಕಿತ್ಸೆ ದೊರೆತ ಕಾರಣ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಅ. 23ರಂದು ಕಿರುಕುಳ ಕುರಿತಂತೆ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಮಗೆ ಅನುಮಾನವಿರುವ ಯುವಕ ಹಾಗೂ ಆತನ ತಾಯಿಯ ಕುರಿತಾಗಿ ದೂರಿನಲ್ಲಿ ಪೊಲೀಸರಿಗೆ ತಿಳಿಸಲಾಗಿತ್ತು. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸಿದರೂ ಸೂಕ್ತ ಸಾಕ್ಷ್ಯಾಧಾರದ ಕೊರತೆಯಿಂದ ಎಚ್ಚರಿಕೆ ನೀಡಿ ಕಳಿಸಿದ್ದರು. ಅ.25ರಂದು ಮತ್ತೆ ಮೆಸೆಂಜರ್‌ ಮೂಲಕ ಜೈಲಿಗೆ ಹೋದರೂ ನಿನ್ನ ಬಿಡುವುದಿಲ್ಲ. ಹೊರಗೆ ಬಂದು ಕೊಲ್ಲುವೆ ಎಂಬ ಮೆಸೇಜ್‌ ಬಂದಿದೆ. ಇದರಿಂದ ಯುವತಿ ಆತಂಕಗೊಂಡು ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ.

ಸುರತ್ಕಲ್‌ ಇಡ್ಯಾದಲ್ಲಿ ಯುವತಿಯ ಕುಟುಂಬ ನೆಲೆಸಿದ್ದು, ಇತ್ತೀಚೆಗೆ ಯುವತಿ ಅಂಗಡಿಯೊಂದನ್ನು ತೆರೆದಿದ್ದಳು. ಅಲ್ಲಿ ಮುಸ್ಲಿಂ ಯುವಕರ ಗುಂಪೊಂದು ಅಂಗಡಿ ಬಳಿ ಬೈಕ್‌ನಲ್ಲಿ ಬಂದು ನಿಲ್ಲುವುದು, ಯುವತಿಯನ್ನು ದುರುಗುಟ್ಟಿ ನೋಡುವುದು, ಆಶ್ಲೀಲ ಸನ್ನೆ ಮಾಡಿ ಮಾನಸಿಕವಾಗಿ ಕಿರುಕುಳ ನೀಡುತ್ತಿರುವುದರ ಬಗ್ಗೆಯೂ ಯುವತಿ ಪತ್ರದಲ್ಲಿ ಬರೆದಿದ್ದು ಪೊಲೀಸರು ಈ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top