ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ತೆರಳಿದ್ದ ವಿದ್ಯಾರ್ಥಿಗೆ ಅನ್ಯಾಯ | ಶಿಕ್ಷಣ ಸಂಸ್ಥೆ ವಿರುದ್ಧ ಮರಾಠಿ ಸಂರಕ್ಷಣಾ ಸಮಿತಿಯಿಂದ ಪ್ರತಿಭಟನೆಯ ನಿರ್ಧಾರ

ಪುತ್ತೂರು : ರಾಷ್ಟ್ರ ಮಟ್ಟದ ಕ್ರೀಡಾಕೂಟ ಕ್ಕೆ ಭಾಗಿಯಾಗಲು ತೆರಳಿದ್ದ ವಿದ್ಯಾರ್ಥಿ ಗೆ ಅನ್ಯಾಯ ಮಾಡಲಾಗಿದೆ ಎಂದು ಮರಾಠಿ ಸಂರಕ್ಷಣಾ ಜಿಲ್ಲಾ ಸಮಿತಿ ಅಧ್ಯಕ್ಷ ಅಶೋಕ್‍ ನಾಯ್ಕ್ ಆರೋಪಿಸಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ವಿರುದ್ಧ ಸಮಿತಿ ಆರೋಪ ಮಾಡಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧಾರಿಸಲಾಗಿದೆ ಎಂದು ತಿಳಿಸಿದರು.

ಮಧ್ಯ ಪ್ರದೇಶದಲ್ಲಿ ಅಖಿಲ ಭಾರತೀಯ ವಿದ್ಯಾಭಾರತಿ ಪ್ರಾಂತೀಯ ಕ್ರೀಡಾಕೂಟದಲ್ಲಿ ಭಾಗಿಯಾಗಬೇಕಿದ್ದ ವಿದ್ಯಾರ್ಥಿಯನ್ನು ಕ್ರೀಡೆಯಲ್ಲಿ ಭಾಗಿಯಾಗಲು ಮಧ್ಯಪ್ರದೇಶಕ್ಕೆ ಕಾಲೇಜು ಆಡಳಿತ ಮಂಡಳಿ ಕಳುಹಿಸಿತ್ತು. ಆದರೆ ಕ್ರೀಡಾಕೂಟದಲ್ಲಿ ಭಾಗಿಯಾಗಲು ಬೇಕಾದ ನೊಂದಣಿಯನ್ನೇ ಕಾಲೇಜು ಮಾಡಿರಲಿಲ್ಲ. ಮಧ್ಯಪ್ರದೇಶದ ಸತ್ನಾ ಕ್ರೀಡಾಂಗಣಕ್ಕೆ ತಲುಪಿದಾಗ ಈ ನೊಂದಣಿ ಮಾಡದ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಕಾಲೇಜು ಸಿಬ್ಬಂದಿಗಳ ಬಳಿ ಕೇಳಿದಾಗ ಹಾರಿಕೆಯ ಮತ್ತು ಬೇಜಾಬ್ದಾರಿಯ ಉತ್ತರ ನೀಡಿದ್ದಾರೆ ಎಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದ ಅಶೋಕ್ ನಾಯ್ಕ್ ತಿಳಿಸಿದರು.







https://screenapp.io/app/#/shared/8P4BcrrHNx























 
 

ಪತ್ರಿಕಾಗೋಷ್ಠಿಯಲ್ಲಿ ಮರಾಠಿ ಸಂರಕ್ಷಣಾ ಸಮಿತಿಯ ಈಶ್ವರ ನಾಯ್ಕ್‍, ಅಣ್ಣು ನಾಯ್ಕ್‍, ಶಿವಪ್ಪ ನಾಯ್ಕ್‍, ನಾರಾಯಣ ನಾಯ್ಕ್‍ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top