ಉಪ್ಪಿನಂಗಡಿ : ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಬಿದ್ದ ಪರಿಣಾಮ ಸಮತ ಸ್ವೀಟ್ಸ್ ಬೇಕರಿ ಸಂಪೂರ್ಣ ಭಸ್ಮವಾದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಬೆಂಕಿಗೆ ಆಹುತಿಯಾದ ಸಮತ ಸ್ವೀಟ್ಸ್ ಬೇಕರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಸ್ಥಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಧನಂಜಯ್ ನಟ್ಟಿಬೈಲ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಉಮೇಶ್ ಶನೈ ರಾಮನಗರ, ಬಿಜೆಪಿ ಉಪ್ಪಿನಂಗಡಿ ಶಕ್ತಿ ಕೇಂದ್ರ ಅಧ್ಯಕ್ಷ ಪ್ರಸಾದ್ ಭಂಡಾರಿ, ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
