ದೇವಸ್ಥಾನ ಪ್ರವೇಶಿಸುವಾಗ ಅಂಗಿ ಕಳಚಿಡುವ ಪದ್ಧತಿಗೆ ಶ್ರೀಗಳ ಆಕ್ಷೇಪ

ಇಂಥ ನಿಯಮಗಳು ಅನಿಷ್ಟ ಎಂದು ಹೇಳಿದ ಸ್ವಾಮೀಜಿ

ತಿರುವನಂತಪುರಂ: ದೇವಸ್ಥಾನದೊಳಗೆ ಪ್ರವೇಶಿಸುವಾಗ ಪುರುಷರು ಅಂಗಿ ಕಳಚಿಡುವ ಪದ್ಧತೆ ಅನಿಷ್ಟಕಾರಕ ಎಂದು ಸ್ವಾಮೀಜಿಯೊಬ್ಬರು ಹೇಳಿದ್ದಾರೆ. ಕೇರಳ, ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಈಗಲೂ ಪುರುಷರು ದೇವಸ್ಥಾನಗಳಲ್ಲಿ ದೇವರ ದರ್ಶನ ಪಡೆಯಲು ಅಂಗಿ ಕಳಚಿ ಒಳಗೆ ಹೋಗಬೇಕೆಂಬ ನಿಯಮ ಆಚರಣೆಯಲ್ಲಿದೆ. ಈ ಸಂಪ್ರದಾಯ ನಿಲ್ಲಿಸಬೇಕು ಎಂದು ಕೇರಳದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಹೇಳಿದ್ದಾರೆ.

ಸಮಾಜ ಸುಧಾರಕ ನಾರಾಯಣ ಗುರು ಸ್ಥಾಪಿಸಿದ ಶಿವಗಿರಿ ಮಠದ ವಾರ್ಷಿಕ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಸ್ವಾಮೀಜಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇವಾಲಯಗಳಿಗೆ ಪ್ರವೇಶಿಸುವ ಸಂದರ್ಭದಲ್ಲಿ ಪುರುಷರಿಗೆ ಶರ್ಟ್ ತೆಗೆಯುವಂತೆ ಹೇಳುವುದು ನಾರಾಯಣ ಗುರುಗಳ ಸಂದೇಶಕ್ಕೆ ವಿರುದ್ಧವಾಗಿದೆ. ಇದು ಸಾಮಾಜಿಕ ಅನಿಷ್ಟ, ಇದನ್ನು ತೆಗೆದು ಹಾಕಬೇಕಾಗಿದೆ. ದೇವಾಲಯಗಳಿಗೆ ಪ್ರವೇಶಿಸುವವರು ಜನಿವಾರ ಧರಿಸಿದ್ದಾರೆಯೇ ಎಂದು ಪರೀಕ್ಷಿಸಲು ಹಿಂದಿನ ಕಾಲದಲ್ಲಿ ಮೇಲಂಗಿ ತೆಗೆಯುವ ಅಭ್ಯಾಸ ರೂಢಿಯಾಯಿತು. ಆದರೆ ನಾರಾಯಣ ಗುರುಗಳಿಗೆ ಸಂಬಂಧಿಸಿದ ಸಂಸ್ಥೆ ಅಡಿಯಲ್ಲಿ ಕರ್ತವ್ಯ ನಿರ್ವಹಿಸುವ ಕೆಲವು ದೇಗುಲಗಳು ಇಂದಿಗೂ ಪುರುಷರಿಗೆ ಮೇಲಂಗಿ ಧರಿಸಿ ದೇಗುಲ ಪ್ರವೇಶವನ್ನು ನಿರ್ಬಂಧಿಸಿವೆ. ಸಂಸ್ಥೆಗಳು ಈ ಬಗ್ಗೆ ಗಮನ ಹರಿಸಬೇಕು ಎಂದಿದ್ದಾರೆ.





















































 
 

ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶ್ರೀಗಳ ಮಾತಿಗೆ ಬೆಂಬಲ ಸೂಚಿಸಿದ್ದು, ಸ್ವಾಮೀಜಿ ತಮ್ಮ ಮಾತಿನ ಮೂಲಕ ಸಾಮಾಜಿಕ ಸುಧಾರಣೆಯ ಸಂದೇಶ ಸಾರಿದ್ದಾರೆ. ಅವರ ಸಲಹೆಗಳು ಸಾಮಾಜಿಕ ಸುಧಾರಣೆಯಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಗುರುವಿನ ಸಂಪ್ರದಾಯವನ್ನು ಎತ್ತಿ ಹಿಡಿಯುವ ಸಲಹೆಯನ್ನು ಸ್ವಾಮಿಗಳು ಮುಂದಿಟ್ಟಿದ್ದಾರೆ. ಯಾರನ್ನೂ ಒತ್ತಾಯಿಸುವ ಅಗತ್ಯವಿಲ್ಲ. ಕಾಲಕ್ಕೆ ತಕ್ಕಂತೆ ಅನೇಕ ಆಚರಣೆಗಳು ಬದಲಾಗಿವೆ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top