ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ನಂತೂರು ಜಂಕ್ಷನ್ನಲ್ಲಿ ಬುಧವಾರ ಪ್ರತಿಭಟನೆ ನಡೆಸಿತು.
ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರ, ಭ್ರಮರಕೊಟ್ಲು ಟೋಲ್ ಗೇಟ್ ತೆರವು, ಹೊಸ ಟೋಲ್ ಗೇಟ್ ನಿರ್ಮಿಸುವ ಮುನ್ನ ಟೋಲ್ ಗೇಟ್ ನಿಯಮಾವಳಿ ಪಾಲನೆ, ನಂತೂರು ಮೇಲ್ಸೇತುವೆ ಹಾಗೂ ಕೂಳೂರು ಸೇತುವೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಮಿತಿ ಮುಂದಿಟ್ಟಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮುನೀರ್ ಕಾಟಿಪಳ್ಳ ಮಾತನಾಡಿ, ಸುರತ್ಕಲ್ನಿಂದ ನಂತೂರುವರೆಗಿನ ರಸ್ತೆಯು ಗುಂಡಿಗಳಿಂದ ಕೂಡಿದ್ದು, ಅಪಘಾತದಲ್ಲಿ ಹಲವಾರು ಜೀವಗಳನ್ನು ಬಲಿತೆಗೆದುಕೊಂಡಿರುವ ಬಗ್ಗೆ ನಮಗೆ ಚೆನ್ನಾಗಿ ತಿಳಿದಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಸಮಸ್ಯೆಗಳಿಂದ ನಲುಗಿದೆ ಎಂದು ಹೇಳಿದರು.