ಭಾರಿ ಪ್ರಮಾಣದ ಅಕ್ರಮ ಸಂಪತ್ತಿನ ಶೋಧ
ಬೆಂಗಳೂರು: ರಾಜ್ಯದ ಪ್ರಮುಖ ಸರಕಾರಿ ಗುತ್ತಿಗೆದಾರನ ಬಂಗಲೆಯೂ ಸೇರಿದಂತೆ ಸುಮಾರು 30 ಕಡೆ ಇಂದು ಬೆಳ್ಳಂಬೆಳಗ್ಗ ಆದಾಯ ಕರ ಇಲಾಖೆಯ ದಾಳಿ ನಡೆದಿದ್ದು, ಪರಿಶೋಧನೆ ಮುಂದುವರಿದಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಎಂಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪದ ಸೇರಿದಂತೆ 10ಕ್ಕೂ ಹೆಚ್ಚಿ ಕಡೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಮೂರು ಕಾರುಗಳಲ್ಲಿ ಬಂದ ಐಟಿ ಅಧಿಕಾರಿಗಳ ತಂಡ ಸ್ಥಳಕ್ಕೆ ಬರುತ್ತಿದ್ದಂತೆ ಸೆಕ್ಯುರಿಟಿ ಗಾರ್ಡ್ ಫೋನ್ ಕಿತ್ತುಕೊಂಡಿದ್ದಾರೆ. ಮೈಸೂರಿನ ದೇವೇಗೌಡ ವೃತ್ತದ ಬಳಿ ಇರುವ ಎಂಪ್ರೋ ಪ್ಯಾಲೇಸ್ ಸೇರಿದಂತೆ ವಿವಿಧೆಡೆ ಬೆಳಗ್ಗಿನಿಂದ ಶೋಧ ನಡೆಸುತ್ತಿದ್ದಾರೆ.
ಮೈಸೂರಿನಲ್ಲಿ ರಾಮಕೃಷ್ಣನಗರದಲ್ಲಿರುವ ಗುತ್ತಿಗೆದಾರ ರಾಮಕೃಷ್ಣೇಗೌಡ ಅವರ ಮನೆ ಮೇಲೂ ಐಟಿ ದಾಳಿ ನಡೆದಿದೆ. ರಾಮಕೃಷ್ಣೇಗೌಡ ಇಟ್ಟಿಗೆ ಫ್ಯಾಕ್ಟರಿ ಸೇರಿದಂತೆ ಇನ್ನಿತರ ವ್ಯವಹಾರ ಮಾಡುತ್ತಿದ್ದರು. ಇವರು ರಾಜ್ಯದ ಭಾರಿ ಕುಳ ಎನ್ನಲಾಗಿದೆ.