ಬೆಳ್ತಂಗಡಿ : ಉಜಿರೆಯ ಎಸ್.ಡಿ.ಯಂ ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೋಧನಾ ಕೇಂದ್ರದ ಅಭ್ಯರ್ಥಿ ಸುವೀರ್ ಜೈನ್ ಅವರಿಗೆ ಪಿಎಚ್.ಡಿ ಪದವಿ ದೊರೆತಿದೆ.
ಇವರು ಡಾ.ಎ.ಜಯಕುಮಾರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಮತ್ತು ಅಭಿವೃದ್ಧಿ- ರುಡ್ ಸೆಟ್ ನ್ನು ಅನುಲಕ್ಷಿಸಿ ಎಂಬ ವಿಷಯದ ಕುರಿತು ಮಹಾಪ್ರಬಂಧ ರಚಿಸಿ ವಿಶ್ವವಿದ್ಯಾಲಯಕ್ಕೆ ಮಂಡನೆ ಮಾಡಿದ್ದರು.
ಪ್ರಸ್ತುತ ಇವರು ಎಸ್.ಡಿ.ಯಂ ಕಾಲೇಜಿನ ಸಮಾಜಕಾರ್ಯ ವಿಭಾಗದಲ್ಲಿ ಕಳೆದ 15 ವರ್ಷಗಳಿಂದ ಪ್ರಾಧ್ಯಾಪಕರಾಗಿ ಮತ್ತು ಕಾಲೇಜಿನ B.voc ವಿಭಾಗದ ಸಂಯೋಜಕರಾಗಿ ಕಾರ್ಯನಿರ್ವಹಿಸುತಿದ್ದಾರೆ.