ಮೊಗಪ್ಪೆಯಲ್ಲಿ‌ ಹೈ ಮಾಸ್ಟ್ ದೀಪ ಅಳವಡಿಸಲು ಶಾಸಕರಿಗೆ ಮನವಿ

ಪುತ್ತೂರು: ಕೊಳ್ತಿಗೆ ಗ್ರಾಮದ ಮೊಗಪ್ಪೆಯಲ್ಲಿ ಹೈ ಮಾಸ್ಡ್ ದೀಪ ಅಳವಡಿಸುವಂತೆ ಎನ್ ಎಸ್ ಯು ಐ ಪ್ರಧಾನ ಕಾರ್ಯದರ್ಶಿ ರೂಪರಾಜ್ ರವರು ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು.

ಜನವಸತಿ ಇರುವ ಮೊಗಪ್ಪೆಯಲ್ಲಿ ರಾತ್ರಿ ವೇಳೆ ಹೈ ಮಾಸ್ಕ್ ದೀಪದ ಅಗತ್ಯ ಇದ್ದು ಗ್ರಾಮಸ್ಥರ ಹಿತದೃಷ್ಟಿಯಿಂದ ದೀಪ ಅಳವಡಿಸುವಂತೆ ಶಾಸಕರಿಗೆ ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ. ಮನವಿ ಸ್ವೀಕರಿಸಿದ ಶಾಸಕರು ಮೊಗಪ್ಪೆಯಲ್ಲಿ ಹೈ ಮಾಸ್ಕ್ ದೀಪ ಅಳವಡಿಸುವ ಭರವಸೆಯನ್ನು ನೀಡಿದ್ದಾರೆ

ಈ ಸಂದರ್ಭದಲ್ಲಿ ಎನ್ ಎಸ್ ಯು ಐಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top