ಅಡಿಕೆ ತೋಟಕ್ಕೆ ಬೆಂಕಿ | ಅಡಿಕೆ ಗಿಡಗಳು ಸುಟ್ಟು ಭಸ್ಮ

ಉಪ್ಪಿನಂಗಡಿ : ಅಡಿಕೆ ತೋಟದಲ್ಲಿ ಬೆಂಕಿ ತಗುಲಿ 250 ಕ್ಕೂ ಹೆಚ್ಚಿನ ಅಡಿಕೆ ಗಿಡಗಳು ಸುಟ್ಟು ಹೋಗಿರುವ ಘಟನೆ ಹಿರೇಬಂಡಾಡಿ ಗ್ರಾಮದ ಪಡ್ಯೂಟ್ಟು ಎಂಬಲ್ಲಿ ನಡೆದಿದೆ.

ಸುಮಾರು 1 ಎಕರೆ ಪ್ರದೇಶದಲ್ಲಿ ಅಡಿಕೆ ತೋಟಗಳಿದ್ದು, ಪಡ್ಕೊಟ್ಟು ನಿವಾಸಿ ಯತೀಶ್ ಶೆಟ್ಟಿ ಎಂಬವರಿಗೆ ಸೇರಿದ ತೋಟ ಇದಾಗಿದೆ.

ಅಡಿಕೆ ಗಿಡಗಳು ಸುಟ್ಟು ಹೋಗಿದ್ದರಿಂದ ಸಾವಿರಾರು ರುಪಾಯಿ ನಷ್ಟ ಸಂಭವಿಸಿದೆ. ಅಡಿಕೆ ಗಿಡಗಳ ಬಳಿ ವಿದ್ಯುತ್ ತಂತಿ ಹಾದು ಹೋಗಿದ್ದರಿಂದ, ಅವಘಡಕ್ಕೆ ಕಾರಣವಾಗಿದೆ ಎಂದು  ಸ್ಥಳೀಯರು ದೂರಿದ್ದಾರೆ. ಘಟನೆ ವೇಳೆ ಪುತ್ತೂರು ಹಾಗೂ ಬೆಳ್ತಂಗಡಿ ಅಗ್ನಿಶಾಮಕ ದಳಕ್ಕೆ ಬೆಂಕಿಯನ್ನು ಹತೋಟಿಗೆ ತರಲು ಅಸಾಧ್ಯವಾಗಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದ ಸಹಕಾರದೊಂದಿಗೆ ನಂದಿಸುವಲ್ಲಿ ಸಾಧ್ಯವಾಯಿತು.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top