ರೈಲ್ವೇ ಗ್ಯಾಂಗ್ಮ್ಯಾನ್ ವಿರುದ್ದ ಪ್ರಕರಣ ದಾಖಲು
ಪಡುಬಿದ್ರಿ : ರೈಲು ಹಳಿಯ ಕಬ್ಬಿಣ ಹೆಕ್ಕಿದ ಬಾಲಕರಿಗೆ ಕೊಂಕಣ ರೈಲ್ವೇ ಗ್ಯಾಂಗ್ಮ್ಯಾನ್ ಹಲ್ಲೆ ನಡೆಸಿರುವ ಘಟನೆ ಫೆ. 17ರಂದು ನಡೆದಿದೆ.
ಹಲ್ಲೆ ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಕೊಂಕಣ ರೈಲ್ವೇ ಗ್ಯಾಂಗ್ಮ್ಯಾನ್ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನೋರ್ವನ ತಂದೆ ಹೆಜಮಾಡಿಯ ಅಬ್ದುಲ್ ಖಾದರ್ ಈ ಬಗ್ಗೆ ಪೊಲೀಸರಿಗೆ ದೂರಿದ್ದಾರೆ.
ಗ್ರಾಮದ ಅವರಾಲು ಮಟ್ಟು ಎಂಬಲ್ಲಿರುವ ಅಜ್ಜನ ಮನೆಗೆ ಬಾಲಕನೋರ್ವ ತನ್ನ ಗೆಳೆಯನೊಂದಿಗೆ ಹೋಗಿದ್ದನು. ಫೆ.15ರಂದು ಮಧ್ಯಾಹ್ನದ ವೇಳೆಗೆ ಇವರಿಬ್ಬರು ಆಟ ಆಡುತ್ತ ರೈಲು ಹಳಿಯ ಬಳಿ ದೊರೆತ ಕಬ್ಬಿಣದ ತುಂಡನ್ನು ಹೆಕ್ಕಿದ್ದರು ಎನ್ನಲಾಗಿದೆ.