ಮಾ.11 : ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್

ಪುತ್ತೂರು : ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ ಮಾ.11 ರಂದು ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ  ನಡೆಯಲಿದೆ.

ಅದಾಲತ್ತಿನಲ್ಲಿ ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ, ಮೂಡಬಿದ್ರೆ, ಬೆಳ್ತಂಗಡಿ, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳ ವ್ಯಾಪ್ತಿಯ ಅಂಚೆ ಸೇವೆಗೆ ಸಂಬಂಧಪಟ್ಟ  ಎಲ್ಲಾ ರೀತಿಯ ಸಾರ್ವಜನಿಕ ಕುಂದು ಕೊರತೆಗಳನ್ನು, ತಕರಾರುಗಳನ್ನು  ಪರಿಶೀಲಿಸಲಾಗುವುದು. 

ಸಾರ್ವಜನಿಕರು ಪುತ್ತೂರು ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು   ಪತ್ರಮುಖೇನ, ಅಂಚೆ ಅದಾಲತ್ ತಲೆಬರಹದಡಿ ಮಾ.7 ರೊಳಗೆ ಹಿರಿಯ ಅಂಚೆ  ಅಧೀಕ್ಷಕರು, ಪುತ್ತೂರು ವಿಭಾಗ, ಪುತ್ತೂರು -574201 ಈ ವಿಳಾಸಕ್ಕೆ  ಕಳುಹಿಸಬಹುದು. ಹಾಗೆಯೇ ಅದೇ ದಿನ 3.30  ಗಂಟೆ ಓಳಗೆ ದೂರವಾಣಿ ಸಂಖ್ಯೆ 08251-230201, 230295 ಕ್ಕೆ ನೇರವಾಗಿಯೂ ಸಂಪರ್ಕಿಸಬಹುದು. ತಮ್ಮ  ದೂರುಗಳನ್ನು ಮಿಂಚಂಚೆ [email protected] ಮೂಲಕ  ಅದಾಲತ್ತಿಗೆ ಮೊದಲು ತಲುಪುವಂತೆ ಕಳುಹಿಸುವುದು. ಪುತ್ತೂರು ಅಂಚೆ  ವಿಭಾಗಕ್ಕೆ ಸಂಬಂಧಿಸಿದ ದೂರುಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top