ನಿನ್ನೆ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಇಂದಿನಿಂದ ಒಂದು ತಿಂಗಳು ಪವಿತ್ರ ವ್ರತ
ಬೆಂಗಳೂರು: ಅಮವಾಸ್ಯೆಯ ಹಿಂದಿನ ದಿನ ಚಂದ್ರನ ದರ್ಶನವಾದ ಹಿನ್ನಲೆಯಲ್ಲಿ ಭಾನುವಾರದಿಂದ ದೇಶಾದ್ಯಂತ ರಮ್ಜಾನ್ ಉಪವಾಸ ಆರಂಭಗೊಂಡಿದೆ. ನಿನ್ನೆ ಕೇರಳದಲ್ಲಿ ಚಂದ್ರದರ್ಶನವಾಗಿದ್ದು, ಹೀಗಾಗಿ ಕರಾವಳಿಯಲ್ಲೂ ಇಂದಿನಿಂದಲೇ ಮುಸ್ಲಿಮರು ಉಪವಾಸ ವ್ರತ ಆರಂಭಿಸಿದ್ದಾರೆ.
ಝೀನತ್ ಬಕ್ಷತ್ ಕೇಂದ್ರ ಜಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಆಗಿರುವಂತ ಎಸ್ಎಂ ರಶೀದ್ ಕರಾವಳಿಯಲ್ಲಿ ಚಂದ್ರನ ದರ್ಶನವಾಗಿದೆ. ಹೀಗಾಗಿ ಕರಾವಳಿಯಲ್ಲಿ ಇಂದಿನಿಂದ ರಂಜಾನ್ ಮಾಸ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಕರಾವಳಿಯಲ್ಲಿ ರಂಜಾನ್ ಉಪವಾಸ ವ್ರತವನ್ನು ಭಾನುವಾರದಿಂದಲೇ ಆಚರಣೆ ಮಾಡುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದ ಕೆಲವೆಡೆ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಇಂದಿನಿಂದ ರಾಜ್ಯಾದ್ಯಂತ ರಮ್ಜಾನ್ ಉಪವಾಸ ವ್ರತ ಆಚರಣೆ ಆರಂಭಗೊಳ್ಳಲಿದೆ ಎಂದು ಮುಸ್ಲಿಂ ಸಮುದಾಯದ ಮುಖಂಡರು ತಿಳಿಸಿದ್ದಾರೆ.
ಬೆಳಗಿನ ಜಾವವೇ ಊಟೋಪಚಾರವನ್ನು ಮುಗಿಸಿದ ಮುಸ್ಲಿಮರು ಒಂದು ತಿಂಗಳ ಉಪವಾಸ ಕೈಗೊಳ್ಳಲಿದ್ದಾರೆ. ಇಂದು ಮುಂಜಾನೆ ಮಸೀದಿಗೆ ಹೋಗಿ ನಮಾಜ್ ಮಾಡಿಬಂದರು. ಕೆಲವರು ಮನೆಗಳಲ್ಲಿಯೇ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿದರು. ಕೆಲವು ದೇಶಗಳಲ್ಲಿ ನಿನ್ನೆ ರಂಜಾನ್ ಉಪವಾಸ ಶುರುವಾದರೆ, ಭಾರತದಲ್ಲಿ ಮಾತ್ರ ಒಂದು ದಿನ ತಡವಾಗಿ ಶುರುವಾಗಿದೆ. ಮಾರ್ಚ್ 2ರಿಂದ ಆರಂಭವಾಗಿ 31ರವರೆಗೆ ಇರಲಿದೆ ಎಂಬುದು ಮುಸ್ಲಿಂ ಧರ್ಮಗುರುಗಳ ತಿಳಿಸಿದ್ದಾರೆ.