ಚಾಮರಾಜನಗರ : ರೆಸಾರ್ಟ್ನಲ್ಲಿ ತಂಗಿದ್ದ ಕುಟುಂಬವೊಂದು ನಿಗೂಢವಾಗಿ ನಾಪತ್ತೆಯಾಗಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ತೆರಳಿದಿದ್ದ ಕುಟುಂಬ ನಂತರ ಕಾಣೆಯಾಗಿದೆ ಎನ್ನಲಾಗಿದೆ.
ಬಂಡೀಪುರ ಬಳಿಯ ಕಂಟ್ರಿ ಕ್ಲಬ್ ರೆಸಾರ್ಟ್ನಲ್ಲಿ ಕುಟುಂಬ ಭಾನುವಾರ ರಾತ್ರಿ ವಾಸ್ತವ್ಯ ಹೂಡಿತ್ತು. ಸೋಮವಾರ ಮಧ್ಯಾಹ್ನದಿಂದ ಕುಟುಂಬ ನಾಪತ್ತೆಯಾಗಿದೆ. ಬೆಂಗಳೂರು ಮೂಲದ ಜೆ.ನಿಶಾಂತ್ (40), ಪತ್ನಿ ಚಂದನಾ ಮತ್ತು 10 ವರ್ಷದ ಗಂಡು ಮಗು ನಾಪತ್ತೆಯಾಗಿದ್ದಾರೆ. ಜೆ.ನಿಶಾಂತ್ ಬ್ಯಾಗ್ ಕಂಟ್ರಿ ಕ್ಲಬ್ ರೆಸಾರ್ಟ್ನಲ್ಲೆ ಇದೆ.
ರೆಸಾರ್ಟ್ನಲ್ಲಿ ಲಗೇಜ್ ಬಿಟ್ಟು ಮೂವರು ಕಾರಿನಲ್ಲಿ ಹೊರಗೆ ಹೋಗಿದ್ದಾರೆ. ಬಂಡೀಪುರ ಮಂಗಲ ರಸ್ತೆಯವರೆಗೆ ಹೋದವರು ಅಲ್ಲಿಂದ ನಾಪತ್ತೆಯಾಗಿದ್ದಾರೆ. ಕುಟುಂಬ ನಾಪತ್ತೆಯಾದ ವಿಚಾರ ತಿಳಿದು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ನಿಶಾಂತ್ ಬಿಬಿಎಂಪಿ ನೌಕರ ಎಂದು ಹೇಳಿಕೊಂಡು ನಕಲಿ ಐಡಿ ನೀಡಿ ರೂಮ್ ಬುಕ್ ಮಾಡಿದ್ದರು. ನಿಶಾಂತ್ ಮೈತುಂಬಾ ಸಾಲ ಮಾಡಿಕೊಂಡಿದ್ದರು. ಯಾವುದೇ ಉದ್ಯೋಗ ಮಾಡುತ್ತಿರಲಿಲ್ಲ. ಸಾಲಗಾರರು ಅಪಹರಿಸಿರುವ ಶಂಕೆಯಿಂದ ಪೊಲೀಸರಿಂದ ತನಿಖೆ ನಡೆಸಿದ್ದಾರೆ. ತಮಿಳುನಾಡು, ಕೇರಳ ಹಾಗೂ ಮೈಸೂರು ಸೇರಿದಂತೆ ಹಲವೆಡೆ ಹುಡುಕಾಡುತ್ತಿದ್ದಾರೆ.