ಮನನೊಂದ ಡೆಂಟಲ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು  | ಪುತ್ತೂರಿನ ಯುವಕ ನಾಪತ್ತೆ |  ಪ್ರಕರಣ ದಾಖಲು

ಪುತ್ತೂರು:  ಸುಳ್ಯದ ಡೆಂಟಲ್ ಕಾಲೇಜಿನಲ್ಲಿ ಓದುತ್ತಿದ್ದ ಯುವತಿಯೊಬ್ಬಳು ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ತೆಲಸಂಗ ಗ್ರಾಮದ ಕೃತಿಕಾ ಸಿದ್ದಣ್ಣ ನಿಡೋಣಿ ಆತ್ಮಹತ್ಯೆ ಮಾಡಿಕೊಂಡ ಯುವತಿ ಎನ್ನಲಾಗಿದೆ. ಮೃತಳ ತಂದೆ ನೀಡಿದ ದೂರಿನ ಮೇರೆಗೆ ಪುತ್ತೂರಿನ ನವೀನ್ ಮತ್ತು ವಸತಿ ಗ್ರಹದ ಮೇಲ್ವಿಚಾರಕಿ ತಾರ ಕುಮಾರಿ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಯುವತಿಗೆ ಪುತ್ತೂರಿನ ನವೀನ್ ಎಂಬಾತ ಪದೇ ಪದೇ ಕರೆ ಮಾಡಿ ತೊಂದರೆ ನೀಡಿ ಫೋಟೋ ವಿಡಿಯೋಗಳನ್ನು ತಂದೆಗೆ ಕಳಿಹಿಸುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನಲೆ ಮಾನಸಿಕವಾಗಿನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಎಲ್ಲಾ ವಿಚಾರಗಳನ್ನು ವಸತಿ ಗೃಹದ ಮೇಲ್ವಿಚಾರಕಿ ತಾರಾ ಗಮನಿಸದೆ, ಆಕೆಯ ಪೋಷಕರ ಗಮನಕ್ಕೆ ತರದೇ ಕರ್ತವ್ಯ ಲೋಪವೆಸಗಿದ್ದಾರೆ ಮತ್ತು ಯುವತಿಯ ಆತ್ಮಹತ್ಯೆಗೆ ಕಾರಣವಾದ ನವೀನ್ ವಿರುದ್ಧ ದೂರು ನೀಡಿದ್ದು, ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂ. 28/2025 ಕಲಂ 108 BNS ಆಕ್ಸ್ ನಂತೆ ಪ್ರಕರಣ ದಾಖಲಾಗಿದೆ. ಸದ್ಯ ಪುತ್ತೂರಿನ ನವೀನ್ ಪರಾರಿಯಾಗಿದ್ದು,  ಆತನಿಗಾಗಿ ಪೊಲೀಸರು ಹುಡುಗಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top