ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ಅಭಿಯಾನ | ಕೆಯ್ಯೂರು ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಅಭಿಯಾನ

ಪುತ್ತೂರು: ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಅವರ ಕನಸಿನ ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ಅಭಿಯಾನದ ಕನಸು ನನಸು ಮಾಡುವ ನಿಟ್ಟಿನಲ್ಲಿ ಕೆಯ್ಯುರು ಗ್ರಾಮ ಪಂಚಾಯತ್ ನಿಂದ ತಿಂಗಳ ಎರಡನೇ ಆದಿತ್ಯವಾರ ಸಂಘ ಸಂಸ್ಥೆ ಗಳ ಸಹಕಾರದಲ್ಲಿ ಸ್ವಚ್ಛತಾ ಅಭಿಯಾನ ಇಂದು ನಡೆಸಲಾಯಿತು.

ಈ ಅಭಿಯಾನದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯೆ ಜಯಂತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ ದ ಪದಾಧಿಕಾರಿಗಳು, ಪೊರ್ಲುದ ಕೆಯ್ಯುರು ಘಟಕ, ವರ್ತಕರ ಸಂಘ, ಅಭಿನವ ಕೇಸರಿ ಮಾಡವು, ಮಾಜಿ ಪಂಚಾಯತ್ ಅಧ್ಯಕ್ಷ ಬಾಬು ಬೊಮ್ಮನಗುಂಡಿ ಮತ್ತು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಇನ್ನು ಮುಂದೆಯೂ ನಿಮ್ಮ ಸಹಕಾರ ಇದೇ ರೀತಿಯಲ್ಲಿ ಇರಲಿ ಎಂದು ಕಾರ್ಯನಿರ್ವಹಣಾಧಿಕಾರಿಯವರು ಅಭಿನಂದನೆ ಸಲ್ಲಿಸಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top