ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರ (ಪೊಡಾ) ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ, ಕೆಪಿಸಿಸಿ ವಕ್ತಾರ, ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ಪ್ರಧಾನ ಸಂಚಾಲಕ ಕೊಳ್ತಿಗೆ ಗ್ರಾಮದ ಅಮಳ ನಿವಾಸಿ ಅಮಳ ರಾಮಚಂದ್ರ ನೇಮಕಗೊಂಡಿದ್ದಾರೆ.
ಕಾಂಗ್ರೆಸ್ ಮುಖಂಡ ಹಾಗೂ ನ್ಯಾಯಾವಾದಿ ಭಾಸ್ಕರ, ಕೋಡಿಂಬಾಳ ಅವರ ತೆರವಾದ ಸ್ಥಾನಕ್ಕೆ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಲತಾ ಕೆ. ಅವರು ರಾಜ್ಯಪಾಲರ ಆಜ್ಞಾನುಸಾರ ಮಾ 13ರಂದು ಆದೇಶ ಹೊರಡಿಸಿದ್ದಾರೆ. ಶಾಸಕ ಅಶೋಕ್ ರೈಯವರು ಅಮಳ ರಾಮಚಂದ್ರರವರ ಹೆಸರನ್ನು ಶಿಫಾರಸ್ಸು ಮಾಡಿದ್ದರು.
ಕೊಳ್ತಿಗೆ ಸೌಹಾರ್ದ ಸಮಿತಿಯ ಕಾರ್ಯಾಧ್ಯಕ್ಷ ಪುತ್ತೂರು ಎಸ್ ಡಿಎಂಸಿ ಒಕ್ಕೂಟದ ಅಧ್ಯಕ್ಷ ಮೆಡಿಕಲ್ ಕಾಲೇಜ್ ಹೋರಾಟ ಸಮಿತಿಯ ಪ್ರಮುಖ ನಾಯಕರಾಗಿಯೂ ಅವರು ಕಾರ್ಯ ನಿರ್ವಹಿಸಿದರು. ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ಸಹಕ ಪುಧಾನ ಸಂಚಾಲಕರಾಗಿ 8 ವರ್ಷಗಳ ಕಾರ್ಯ ನಿರ್ವಹಿಸಿದ್ದರು. ಇದೀಗ 2024ರಲ್ಲಿ ಮತ್ತೆ ಪ್ರಧಾನ ಸಂಚಾಲಕರಾಗಿ ನೇಮಕಗೊಂಡಿದ್ದರು.