ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ

ಸುಳ್ಯ: ತಾಲೂಕಿನ ಕುಂಬರ್ಚೋಡು ತಿರುವಿನಲ್ಲಿ ತಡ ರಾತ್ರಿ ಭಾರತ್ ಗ್ಯಾಸ್ ಸಿಲಿಂಡರ್ ಸರಬರಾಜು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ.

ಅಪಘಾತದಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಅವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದೂ ತಿಳಿದುಬಂದಿದೆ.

ಅಪಘಾತದ ಕಾರಣವಾಗಿ ಸ್ಥಳದಲ್ಲಿ ಅಲ್ಪ ಸಮಯ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಲಾರಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್‌ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದೆ ಮತ್ತು ಅಲ್ಲಿ ಬದಿಯ ಕಂದಕಕ್ಕೂ ಉರುಳಿದೆ ಎನ್ನಲಾಗಿದೆ.

 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top