ಹೋಳಿ ಗಮ್ಮತ್ತಿನಲ್ಲಿ ಹೊಡೆದಾಟ : ಮೂವರ ಹತ್ಯೆ

ನಶೆ ಏರಿದ ಬಳಿಕ ರಾಡ್‌, ದೊಣ್ಣೆಯಿಂದ ಬಡಿದಾಡಿಕೊಂಡ ಸ್ನೇಹಿತರು

ಬೆಂಗಳೂರು: ಹೋಳಿ ಗಮ್ಮತ್ತಿನಲ್ಲಿ ಕಂಠಮಟ್ಟ ಶರಾಬು ಕುಡಿದು ನಶೆ ತಲೆಗೇರಿಸಿಕೊಂಡಿದ್ದ ಬಿಹಾರ ಮೂಲದ ಆರು ಕಾರ್ಮಿಕರು ಪರಸ್ಪರ ಹೊಡೆದಾಡಿಕೊಂಡ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಓರ್ವನಿಗೆ ಗಂಭೀರ ಗಾಯವಾಗಿದ್ದು, ಇಬ್ಬರು ಪರಾರಿ ಆಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದ ನಿರ್ಮಾಣ ಹಂತದ ಫೋರ್‌ವಾಲ್ ಅವೆನ್ಯೂ ಅಪಾರ್ಟ್​ಮೆಂಟ್​ನ​ 3ನೇ ಮಹಡಿಯಲ್ಲಿ ಘಟನೆ ನಡೆದಿದೆ. ಕೊಲೆಯಾದ ಇಬ್ಬರನ್ನು ಅನ್ಸು(19) ಮತ್ತು ರಾಧೆ ಶ್ಯಾಮ್(20) ಎಂದು ಗುರುತಿಸಲಾಗಿದೆ. ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಸರ್ಜಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಹೋಳಿ ಹಬ್ಬದ ರಜೆ ಇದ್ದ ಹಿನ್ನೆಲೆಯಲ್ಲಿ ಕೂಲಿ ಕೆಲಸಕ್ಕೆ ಬೆಂಗಳೂರಿಗೆ ಬಂದಿದ್ದ ಬಿಹಾರದ ಒಂದೇ ಗ್ರಾಮದ ವಾಸಿಗಳು ನಿನ್ನೆ ಎಣ್ಣೆ ಪಾರ್ಟಿ ಮಾಡಿದ್ದರು. ಕಂಠಪೂರ್ತಿ ಕುಡಿದು ಕೈಗೆ ಸಿಕ್ಕ ದೊಣ್ಣೆ ಮತ್ತು ರಾಡ್​ನಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಲ್ಲೆ ವೇಳೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಯಗೊಂಡಿದ್ದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top