ಪಾಕಿಸ್ಥಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಐಎಸ್‌ಐ ಏಜೆಂಟ್‌ ಸೆರೆ

ಬೆಂಗಳೂರಿನ ಬಿಇಎಲ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ

ಬೆಂಗಳೂರು : ಗುಪ್ತಚರ ಇಲಾಖೆ ಹಾಗೂ ಸೇನಾ ಇಂಟೆಲಿಜೆನ್ಸ್ ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಪಾಕಿಸ್ಥಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ಉತ್ತರಪ್ರದೇಶದ ಗಾಜಿಯಾಬಾದ್​​​ ಮೂಲದ ನಿವಾಸಿ ಬಿಇಎಲ್​​​ನಲ್ಲಿ ಕೆಲಸ ಮಾಡುತ್ತಿದ್ದ ದೀಪ್‌ರಾಜ್​ ಚಂದ್ರ ಎಂಬಾತ ಬಂಧನಕ್ಕೊಳಗಾದ ವ್ಯಕ್ತಿ. ಈತ ಪಾಕಿಸ್ಥಾನದ ಗೂಢಚಾರ ಸಂಸ್ಥೆ ಐಎಸ್‌ಐ ಪರವಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಬಾಹ್ಯಾಕಾಶ ಮತ್ತು ಸೇನೆಗಾಗಿ ಆಧುನಿಕ ರಕ್ಷಣಾ ಉಪಕರಣಗಳನ್ನು ತಯಾರಿಸುವ ಕೇಂದ್ರ ಸರಕಾರ ಸ್ವಾಮ್ಯದ ಬಿಇಎಲ್​ನ ಪ್ರಾಡಕ್ಟ್​​​ ಡೆವಲಪ್‌ಮೆಂಟ್ ಆ್ಯಂಡ್ ಇನ್ನೋವೇಶನ್​​ ಸೆಂಟರ್​ ವಿಭಾಗದಲ್ಲಿ ಈತ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ಮತ್ತಿಕೆರೆ ಬಳಿ ನೆಲೆಸಿದ್ದ. ಈತ ಬಿಇಎಲ್​​​ನಿಂದ ರಕ್ಷಣಾ ವಿಚಾರಗಳನ್ನು ಪಾಕಿಸ್ಥಾನಕ್ಕೆ ರವಾನಿಸುತ್ತಿದ್ದ ಎಂಬ ಆರೋಪವಿದೆ.
ಕೇಂದ್ರ ಮತ್ತು ರಾಜ್ಯ ಗುಪ್ತಚರ ಅಧಿಕಾರಿಗಳು, ಮಿಲಿಟರಿ ಇಂಟಲಿಜೆನ್ಸ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿವೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top