ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಮತ್ತು ಬೆಳ್ಳಾರೆ ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ, ಸಮಾಜ ಕಾರ್ಯ ವಿಭಾಗ ಮತ್ತು ಪ್ರಜ್ಞಾಶ್ರಮ ಬೌದ್ಧಿಕ ದಿವ್ಯಾಂಗರ ವಸತಿಯುಕ್ತ ಕೇಂದ್ರ ಬೀರಮಲೆ ಬೆಟ್ಟ ಪುತ್ತೂರು ಸಯುಕ್ತ ಆಶ್ರಯದಲ್ಲಿ “ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮ ಅಕ್ಷಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುವ ಮಾನಸಿಕ ಖಿನ್ನತೆಗೆ ವೈದ್ಯಕೀಯ ಚಿಕಿತ್ಸೆಯ ಜೊತೆಗೆ ದೈವದೇವರ ಮೇಲಿಡುವ ನಂಬಿಕೆಯೂ ಫಲಕಾರಿಯಾಗಬಹುದು ಎಂದು ಹೇಳಿದರು.

ವಿಶೇಷ ಚೇತನರ ವಿವಿಧೋದ್ದೇಶ ಪುನರ್ವಸತಿ ಪುತ್ತೂರು ತಾಲೂಕು ಕಾರ್ಯಕರ್ತ ನವೀನ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಬೀಳುವ ಒತ್ತಡ ಮತ್ತು ಮಾನಸಿಕ ಖಿನ್ನತೆಯ ಕುರಿತು ವಿದ್ಯಾರ್ಥಿಗಳಿಗೆ ಮನದಟ್ಟು ಆಗುವಂತೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿಗಳಾದ ಕಿಶೋರ್ ಕುಮಾರ್ ರೈ, ಕುಮಾರಿ ಮೇಘಶ್ರೀ ಉಪಸ್ಥಿತರಿದ್ದರು.
ಬೆಳ್ಳಾರೆ ಡಾI ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಗಿರೀಶ್ ಸಿ. ಆರ್. ಪ್ರಸ್ತಾವಿಕವಾಗಿ ಮಾತನಾಡಿದರು. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಾದ ಅಶೋಕ್ ಸ್ವಾಗತಿಸಿ, ಲಿಖಿನ್ ವಂದಿಸಿದರು. ಅಕ್ಷಯ ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಕೃಷ್ಣ ಪ್ರಾರ್ಥಿಸಿದರು. ಕುಮಾರಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.