ನಾನೇನು ಮಾಡಲಿ? ಯಾರ ವಿರುದ್ಧ ತನಿಖೆ ನಡೆಸಲಿ?

ಹನಿಟ್ರ್ಯಾಪ್‌ ಪ್ರಕರಣದ ಬಗ್ಗೆ ಗೃಹ ಸಚಿವರ ಅಸಹಾಯಕತೆ

ಬೆಂಗಳೂರು: ದೇಶಾದ್ಯಂತ ಸುದ್ದಿ ಮಾಡಿರುವ ಹನಿಟ್ರ್ಯಾಪ್‌ ಪ್ರಕರಣದ ತನಿಖೆಗೆ ಸಂಬಂಧಿಸಿ ಗೃಹ ಸಚಿವ ಜಿ.ಪರಮೇಶ್ವರ ಮತ್ತೆ
ಅಸಹಾಯಕತೆ ಪ್ರದರ್ಶಿಸಿದ್ದಾರೆ. ಯಾರಾದರೂ ದೂರು ಕೊಡದೆ ಪ್ರಕರಣದ ತನಿಖೆ ಮಾಡಲು ಸಾಧ್ಯವಿಲ್ಲ, ಯಾರ ವಿರುದ್ಧ ಎಂದು ತನಿಖೆ ಮಾಡಬಹುದು ಎಂದು ಬೇಜವಾಬ್ದಾರಿಯಾಗಿ ಮಾತನಾಡಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಪರಮೇಶ್ವರ, ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಣ್ಣ ದೂರು ಕೊಡದೇ ನಾನೇನು ಮಾಡಲಿ? ಎಫ್‌ಐಆರ್ ಆಗದೇ ತನಿಖೆಗೆ ಕೊಡಲು ಆಗಲ್ಲ. ರಾಜಣ್ಣ ಏನು ಮಾಡುತ್ತಾರೋ ನೋಡೋಣ. ರಾಜಣ್ಣಗೆ ಬಹಳ ಜನ ಆಪ್ತರು ಇದ್ದಾರೆ. ನನ್ನ ಬಿಟ್ಟು ಬಹಳ ಜನ ಇದ್ದಾರೆ. ಅವರು ಯಾರ ಜೊತೆ ಏನು ಮಾತನಾಡುತ್ತಾರೋ ನನಗೇನು ಗೊತ್ತು ಎಂದರು.
ಹನಿಟ್ರ‍್ಯಾಪ್ ವಿಚಾರ ಬೋಗಸ್ ಎಂದಿದ್ದ ಡಿಕೆಶಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಈಗ ಇದರ ಬಗ್ಗೆ ಏನೂ ಮಾತಾಡಲ್ಲ. ರಾಜಣ್ಣ ದಿನಪೂರ್ತಿ ನನ್ನ ಜೊತೆಯೇ ಇದ್ದರು, ಏನೂ ಹೇಳಿಲ್ಲ. ರಾಜಣ್ಣಗೆ ನನ್ನನ್ನೂ ಸೇರಿದಂತೆ ಬಹಳ ಜನ ಆಪ್ತರು ಇದ್ದಾರೆ ಎಂದು ಹೇಳಿದರು.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top