ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಿತ್ತೂರು ಶಾಲೆಯ ಸಭಾಂಗಣಕ್ಕೆ  ಸಹಾಯಧನ ಮಂಜೂರಾತಿ ಪತ್ರ ವಿತರಣೆ

ಮಿತ್ತೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ). ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮಿತ್ತೂರು ಇದರ  ಸಭಾಂಗಣ ರಚನೆಗೆ ಒಂದು  ಲಕ್ಷದ ಸಹಾಯಧನ ಮಂಜೂರಾತಿ ಪತ್ರವನ್ನು ಮಾ.27 ಗುರುವಾರದಂದು ವಿತರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಯಿಣಿ ಸರೋಜಾರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕಿನ ಯೋಜನಾಧಿಕಾರಿ ರಮೇಶ್‍ ಅವರು ಹಸ್ತಾಂತರಿಸಿದರು.

 ಈ ಸಂದರ್ಭದಲ್ಲಿ ವಲಯ  ಮೇಲ್ವಿಚಾರಕಿ ಆಶಾ ಪಾರ್ವತಿ, ಸೇವಾ ಪ್ರತಿನಿಧಿ ಸುಗಂಧಿನಿ, ಶೌರ್ಯ ಸದಸ್ಯರಾದ ಪದ್ಮನಾಭ, ವೆಂಕಟರಮಣ,  ಪೃಥ್ವಿರಾಜ್ , ಶಾಲಾ SDMC ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ, SDMC ಸದಸ್ಯರು ಮತ್ತು ಸಹ ಶಿಕ್ಷಕರು  ಉಪಸ್ಥಿತರಿದ್ದರು.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top