ಉಡುಪಿ: ಅಪರಿಚಿತ ವ್ಯಕ್ತಿಯೊಬ್ಬ ಪಾದಾಚಾರಿ ಮಹಿಳೆಯೊಬ್ಬರ 3.5 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಮಣಿಪಾಲದ ಡಬ್ಲ್ಯೂಜಿಎಸ್ ಎಚ್ ಎ ಕಾಲೇಜು ಬಳಿ ನಡೆದಿದಿದೆ.
ಪರ್ಕಳದ ಹೇರ್ಗಾ ನಿವಾಸಿ ವಸಂತಿ (51) ಸುಮಾರು 45 ಗ್ರಾಂ ತೂಕದ, ಅಂದಾಜು 3,50,000 ರೂ. ಮೌಲ್ಯದ ಚಿನ್ನದ ಸರ ಕಳೆದುಕೊಂಡಿದ್ದಾರೆ.
ಮಣಿಪಾಲದ ಖಾಸಗಿ ಆಸ್ಪತ್ರೆಯ ಬಿಲ್ಲಿಂಗ್ ವಿಭಾಗದಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ವಸಂತಿ ಅವರು ಸಂಜೆ 5:30 ರ ಸುಮಾರಿಗೆ ತಮ್ಮ ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅವರು ಡಬ್ಲ್ಯೂಜಿಎಸ್ ಎಚ್ ಎ ಕಾಲೇಜಿನ ಹಿಂಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಅಪರಿಚಿತ ವ್ಯಕ್ತಿಯೋರ್ವ ಬಲವಂತವಾಗಿ ವಸಂತಿ ಅವರ ಕುತ್ತಿಗೆಯನ್ನು ಹಿಡಿದಿದ್ದಾನೆ. ಬಳಿಕ ಆತ ವಸಂತಿ ಅವರು ಧರಿಸಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾನೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.