ಸುಳ್ಯ ನಗರ ಪಂಚಾಯ್ ವ್ಯಾಪ್ತಿಯ ಬಹುಬೇಡಿಕೆಯ ರಸ್ತೆ ಕೊಡಿಯಾಲಬೈಲು- ನೀರಬಿದಿರೆ- ದುಗಲಡ್ಕ- ರಸ್ತೆಯು 45ಲಕ್ಷದ ವೆಚ್ಚದಲ್ಲಿ ಅಭಿವೃದ್ಧಿಯಾಗಲಿದ್ದು ಇದರ ಗುದ್ದಲಿಪೂಜೆ ನಡೆಯಿತು.
ದುಗಲಡ್ಕ- ನೀರಬಿದಿರೆ ರಸ್ತೆಯ ಅಭಿವೃದ್ಧಿಗೆ ಗುದ್ದಲಿಪೂಜೆಯನ್ನು ಮಾನ್ಯ ಶಾಸಕರಾದ ಭಾಗೀರಥಿ ಮುರುಳ್ಯ ನೆರವೆರಿಸಿದರು.

ಈ ಸಂದರ್ಭದಲ್ಲಿ ಸುಳ್ಯ ನಗರಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಉಪಾಧ್ಯಕ್ಷ ಬುದ್ದನಾಯ್ಕ, ಸದಸ್ಯರಾದ ಕಿಶೋರಿ ಶೇಟ್, ಬಾಲಕೃಷ್ಣ ರೈ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಭಾಜಪ ಮಂಡಲ ಅಧ್ಯಕ್ಷ ವೆಂಕಟ ವಳಲಂಬೆ, ನಗರ ಮಹಾಶಕ್ತಿ ಕೇಂದ್ರ ಪ್ರಮುಖರಾದ A.T ಕುಸುಮಾಧರ ಮತ್ತು ಪಕ್ಷದ ಪ್ರಮುಖರು ಹಾಗೂ ರಸ್ತೆಯ ಫಲಾನುಭವಿಗಳು ಉಪಸ್ಥಿತರಿದ್ದರು.