ಪುತ್ತೂರು: ಕುರಿಯ ಗ್ರಾಮದ ಮಲಾರ್ ನಿವಾಸಿ, ಕಲ್ಲರ್ಪೆ ಚಿನ್ನು ಹೋಟೆಲ್ ಮಾಲಕ ಮೋಹನ್ (38 ವ.) ಅವರು ಸೋಮವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ತಿಳಿದು ಬಂದಿದೆ.
ಮಲಾರಿನ ತನ್ನ ಮನೆಯ ಒಳಗಡೆಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂದರ್ಭ ಡೆತ್ ನೋಟ್ ಲಭಿಸಿದ್ದು, ಡೆತ್ ನೋಟ್’ನಲ್ಲಿ, ಸಾಲಬಾಧೆಯೇ ತನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದಾರೆ.
ನೆರೆಯ ಮನೆಯಲ್ಲಿ ಕಾರ್ಯಕ್ರಮಕ್ಕೆಂದು ಮನೆಯವರು ಹೋಗಿದ್ದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನ;ಲಾಗಿದೆ. ಮೃತರು ತಾಯಿ, ಪತ್ನಿ ಹಾಗೂ 4 ವರ್ಷದ ಮಗುವನ್ನು ಅಗಲಿದ್ದಾರೆ.