ಸುಳ್ಯ: ನಿಯಂತ್ರಣ ತಪ್ಪಿ ಕಾರೊಂದು ಮನೆಯ ಮಹಡಿಯ ಮೇಲೆ ಬಿದ್ದಿರುವ ಘಟನೆ ನಡೆದಿದೆ.
ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರ ಸೊಸೆ, ಮಾವನ ಕಾರನ್ನು ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ ಹೊರಟಿದ್ದರು ಎನ್ನಲಾಗಿದೆ.
ಚಿರೆಕಲ್ ನ ಮನೆಯಿಂದ ಮುಖ್ಯರಸ್ತೆಗೆ ಬಂದು ಸ್ವಲ್ಪ ಮುಂದಕ್ಕೆ ಹೋದಾಗ ಕಾರಿಗೆ ಬ್ರೇಕ್ ಹಾಕಿದಾಗ ಬ್ರೇಕ್ ನ ಅಡಿಗೆ ನೀರಿನ ಬಾಟಲ್ ಸಿಲುಕಿ ಬ್ರೇಕ್ ಸಿಗದ ಕಾರಣ ನಿಯಂತ್ರಣ ತಪ್ಪಿ ರಸ್ತೆಯ ಕೆಳಭಾಗದಲ್ಲಿದ್ದ ಸೀತಮ್ಮ ಚಿರೆಕಲ್ಲು ಎಂಬವರ ಮನೆಯ ಮಹಡಿಯ ಮೇಲೆ ಕಾರು ಬಿದ್ದಿದೆ ಎನ್ನಲಾಗಿದೆ.