ಪುತ್ತೂರು :ಮನೆಯಿಂದ ಹೊರಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯೋರ್ವ ಭಾನುವಾರ ಅರಸಿಕೆರೆಯಲ್ಲಿ ಪತ್ತೆಯಾಗಿದ್ದಾನೆ.
ಶನಿವಾರ ಸಂಜೆ ಕೊಡಿಪ್ಪಾಡಿ ಮನೆಯಿಂದ ಇನ್ನು ಹುಡುಕಬೇಡಿ ಎಂದು ಹೇಳಿ ನಾಪತ್ತೆಯಾಗಿದ್ದ ಕೊಡಿಪ್ಪಾಡಿ ನಿವಾಸಿ ರಝಕ್ ಮತ್ತು ಸಕೀನ ದಂಪತಿ ಪುತ್ರ ಪುತ್ತೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್ (15) ಪತ್ತೆಯಾದಾತ.
ಈ ಕುರಿತು ಪೋಷಕರು ಪುತ್ತೂರು ಠಾಣೆಯಲ್ಲಿ ದೂರು ನೀಡಿದ್ದು ಪೋಷಕರಿಂದ ಮಾಹಿತಿ ಪಡೆದು ಹುಡುಕಾಡುತ್ತಿದ್ದಂತೆ ಸಂಜೆ ಅರಸಿಕೆರೆ ಸಮೀಪ ಈತ ಪತ್ತೆಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.