ಬೆಳ್ತಂಗಡಿ: ಹಣದ ವಿಚಾರಕ್ಕೆ ಸಂಬಂಧಿಸಿ ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಯುವಕರ ನಡುವೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ.
ಘಟನೆಯಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳ ವಿರುದ್ಧ ಪೊಲೀಸರು ಭಾರತೀಯ ನ್ಯಾಯ ಸಂಹಿತೆ, ಕಲಂ 109,351(2) ಜತೆ 3(5) ಕೊಲೆಯತ್ನ ಪ್ರಕರಣ ದಾಖಲಿಸಿದ್ದರು. ಇದೀಗ ಮೊದಲ ಆರೋಪಿ ನ್ಯಾಯಾಂಗ ಬಂಧನದಲ್ಲಿರುವ ಹಮೀದ್ ಗೆ ನಿಯಮಿತ ಜಾಮೀನು ಮತ್ತು ಎರಡನೇ ಆರೋಪಿ ರಿಯಾಝ್ ಮತ್ತು ಮೂರನೇ ಆರೋಪಿ ಅರ್ಷಾದ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಫೆ.5 ರಂದು ಪ್ರಕರಣ ಮಾಚಾರಿನಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಇನ್ನೋರ್ವ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುತ್ತಾನೆ. ಸೋಮವಾರ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಇದ್ದ ಪೀಠವು ಈ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳ ಪರ ಹೈಕೋರ್ಟ್ ವಕೀಲರುಗಳಾದ ಮುಸ್ತಫಾ ಬೆಳ್ತಂಗಡಿ, ಅನ್ವರ್ ಕೆ.ಪಿ.ಕುಪ್ಪೆಟ್ಟಿ ಮತ್ತು ಮೋನಿಸ್ ಸಾಹುಕರ್ ವಾದ ಮಂಡಿಸಿದ್ದರು.