ಪುತ್ತೂರು: ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕುಂಟಾರು ಬಳಿ ಇಂದು ನಡೆದಿದೆ.
ಯೋಗಿ ಎಂಬಾತ ಅಪಘಾತದಲ್ಲಿ ಮೃತಪಟ್ಟವರು
ಗಾಳಿಮುಖ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯೋಗಿ ಮೂಲತಃ ಕೊಟ್ಯಾಡಿ ನಿವಾಸಿಯಾಗಿದ್ದಾರೆ. ಅಪಘಾತದಿಂದ ಬೈಕ್ ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.