ಪುತ್ತೂರು: ಬಾಡಿಗೆಗೆಂದು ಹೋದ ರಿಕ್ಷಾ ಚಾಲಕನೋರ್ವ ರಿಕ್ಷಾ ಸಹಿತವಾಗಿ ನಾಪತ್ತೆಯಾದ ಘಟನೆ ನಡೆದಿದೆ.
ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಬಾಡಿಗೆಗೆಂದು ಹೋದ ಸಾಲ್ಮರ ಸೂತ್ರ ಬೆಟ್ಟು ನಿವಾಸಿ ಆಟೋ ರಿಕ್ಷಾ ಚಾಲಕ ಲೋಕೇಶ ಎಂಬವರು ರಿಕ್ಷಾ ಸಮೇತ ನಾಪತ್ತೆಯಾಗಿರುವ ಕುರಿತು ಎ.21ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗ್ಗೆ 5.30ಕ್ಕೆ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಬಾಡಿಗೆ ಇದೆ ಎಂದು ಮನೆಯಿಂದ ಹೋದವರು ಮತ್ತೆ ಮನೆಗೆ ವಾಪಸಾಗಿಲ್ಲವೆಂದು ತಿಳಿದು ಬಂದಿದೆ.
ಈ ಘಟನಾ ಕುರಿತು ಇತರ ಅಟೋ ರಿಕ್ಷಾದವರಲ್ಲಿ ವಿಚಾರಿಸಿದಾಗ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಲೋಕೇಶ ಅವರ ಪತ್ನಿ ಸುವರ್ಣ ಬಿ.ಎಸ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.