ಪುತ್ತೂರು : ಕಾರು ಮತ್ತು ಅಕ್ಟಿವಾ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಬಳಿ ನಡೆದಿದೆ.
ಘಟನೆಯಿಂದಾಗಿ ಆಕ್ಟಿವಾ ಸಂಪೂರ್ಣ ಜಖಂಗೊಂಡಿದೆ. ಕೊಡಿಪ್ಪಾಡಿ ನಿವಾಸಿ ರಫೀಕ್ ಎಂಬಾತನಿಗೆ ಗಂಭೀರ ಗಾಯಗಳಾಗಿವೆ.
ಅದೇ ರಸ್ತೆಯಾಗಿ ತೆರಳುತ್ತಿದ್ದ ಉದ್ಯಮಿ ಉಜ್ವಲ್ ಪ್ರಭು ತಕ್ಷಣ ತನ್ನ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.