ನಿನ್ನೆಯಿಂದೀಚೆಗೆ ಪಾಕ್ ಸೈನಿಕರ ಕಸ್ಟಡಿಯಲ್ಲಿರುವ ಭಾರತೀಯ ಯೋಧ
ಶ್ರೀನಗರ: ಆಕಸ್ಮಿಕವಾಗಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಬಂಧನಕ್ಕೆ ಒಳಗಾಗಿರುವ ಗಡಿ ಭದ್ರತಾ ಪಡೆ ಯೋಧನನ್ನು ಹಸ್ತಾಂತರ ಮಾಡಲು ಪಾಕಿಸ್ತಾನ ಮೊಂಡಾಟ ಮಾಡುತ್ತಿದೆ. ಗುರುವಾರ ಸಂಜೆ ಧ್ವಜ ಸಭೆಗೆ ರೇಂಜರ್ಗಳು ಬರಲಿಲ್ಲ. ಮಾಧ್ಯಮಗಳಲ್ಲಿ ತಾನು ಒಳ್ಳೆಯವನು ಎಂದು ಪ್ರಚಾರ ಮಾಡುವ ಸಲುವಾಗಿ ಪಾಕಿಸ್ತಾನ ಭಾರತೀಯ ಯೋಧನನ್ನು ಬಳಸಲು ಮುಂದಾಗಿದೆ ಎನ್ನಲಾಗಿದೆ.
ಪಂಜಾಬ್ನ ಫಿರೋಜ್ಪುರ ಬಳಿ ಗುರುವಾರ ಆಕಸ್ಮಿಕವಾಗಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿದ್ದ 182ನೇ ಬೆಟಾಲಿಯನ್ ಕಾನ್ಸ್ಟೆಬಲ್ ಪಿ.ಕೆ ಸಾಹು ಅವರನ್ನು ಪಾಕಿಸ್ತಾನ ರೇಂಜರ್ಗಳು ಬಂಧಿಸಿ ಕರೆದೊಯ್ದಿದ್ದಾರೆ. ಬಂದನಕ್ಕೆ ಒಳಗಾದ ಸಾಹು ಅವರನ್ನು ಬಿಡುಗಡೆ ಮಾಡಲು ಬಿಎಸ್ಎಫ್ ಪ್ರಯತ್ನ ನಡೆಸುತ್ತಿದೆ. ಸಾಹು ಅವರನ್ನು ಗಡಿ ಹೊರಠಾಣೆಯಿಂದ ದೂರದಲ್ಲಿರುವ ಪಾಕಿಸ್ತಾನಿ ಪ್ರದೇಶಕ್ಕೆ ಕರೆದುಕೊಂಡು ಹೋಗಲಾಗಿದೆ.
ಪಶ್ಚಿಮ ಬಂಗಾಳದ ನಿವಾಸಿ ಸಾಹು ಸಮವಸ್ತ್ರದಲ್ಲಿದ್ದರು ಮತ್ತು ಅವರ ಸೇವಾ ರೈಫಲ್ ಅನ್ನು ಹೊಂದಿದ್ದರು. ರಜೆಯಲ್ಲಿ ಮನೆಗೆ ಹೋಗಿದ್ದ ಅವರು ಮಾರ್ಚ್ 31ರಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಕಳೆದ 17 ವರ್ಷಗಳ ಕಾಲ ಬಿಎಸ್ಎಫ್ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.