ಮಂಗಳೂರು : ಅನೇಕ ಕಡೆಗಳಲ್ಲಿ ಗೋ ಹತ್ಯೆ, ಗೋ ಸಾಗಾಟದ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇದೀಗ ಅಂತಹದ್ದೇ ಗೋ ಸಾಗಾಟ ಮಾಡುತ್ತಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೂಳೂರು ಸೇತುವೆಯ ಬಳಿಯಿಂದ ತಣ್ಣೀರು ಬಾವಿಗೆ ಹೋಗುವ ರಸ್ತೆಯಲ್ಲಿ ಅಕ್ರಮ ದನ ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದ ಯುವಕರು ಪೊಲೀಸರ ವಶವಾದ ಘಟನೆ ನಿನ್ನೆ (ಏ.24) ತಡರಾತ್ರಿ ನಡೆದಿದೆ.
ಯುವಕರು ಮೂರು ದನಗಳಿಗೆ ಆಹಾರ ನೀಡುತ್ತಾ ಅದನ್ನು ಹಿಡಿದು ವಾಹನದಲ್ಲಿ ತುಂಬಿಸಿ ಸಾಗಿಸುತ್ತಿದ್ದಾಗ ಸಂಶಯಗೊಂಡ ಸ್ಥಳೀಯರು ತಡೆದು ಪ್ರಶ್ನಿಸಿದ್ದಾರೆ. ಬಳಿಕ ದನ ಸಾಗಿಸಲು ಯತ್ನಿಸುತ್ತಿದ್ದಾರೆ ಎಂದು ತಿಳಿದು, ತಡೆದು ಮೂವರು ಯುವಕರನ್ನು ಪೊಲೀಸರಿಗೊಪ್ಪಿಸಿ ನಡೆಯಬೇಕಾದ ಬಹುದೊಡ್ಡ ಅನಾಹುತವನ್ನು ತಡೆದಿದ್ದಾರೆ.
ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು ದನಗಳು ಸಹಿತ ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲಿಸರು ತನಿಖೆ ನಡೆಸುತ್ತಿದ್ದಾರೆ.