ಪಾಕ್‌ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ ಹೇಳಿಕೆ

ನಿಶಾನ್-ಎ-ಪಾಕಿಸ್ಥಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ ಎಂದು ಕಿಡಿಕಾರಿದ ಆರ್‌.ಅಶೋಕ್‌

ಬೆಂಗಳೂರು: ಪಾಕಿಸ್ಥಾನದ ಜೊತೆಗೆ ಭಾರತ ಯುದ್ಧ ಮಾಡಬಾರದು ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ಪಾಕಿಸ್ಥಾನದ ಮಾಧ್ಯಮಗಳು ಪ್ರಮುಖ ಸುದ್ದಿಯಾಗಿ ಪ್ರಕಟಿಸಿವೆ.

ಮಾಧ್ಯಮದವರ ಜೊತೆಗೆ ಮಾತನಾಡುತ್ತಿದ್ದಾಗ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ನರಮೇಧ ನಡೆಸಿದ ಉಗ್ರ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಪಾಕಿಸ್ಥಾನದ ಜೊತೆಗೆ ಭಾರತ ಯುದ್ಧ ಮಾಡಬಾರದು, ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಿದರೆ ಸಾಕು. ಉಗ್ರರ ದಾಳಿಗೆ ಕೇಂದ್ರ ಸರಕಾರದ ವೈಫಲ್ಯ ಕಾರಣ ಎಂದು ಹೇಳಿದ್ದರು. ಈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಇದರ ಬೆನ್ನಿಗೆ ಪಾಕಿಸ್ಥಾನದ ಮಾಧ್ಯಮಗಳು ಈ ಸುದ್ದಿಗೆ ಬಹಳ ಮಹತ್ವ ಕೊಟ್ಟು ಪ್ರಕಟಿಸಿವೆ.







https://screenapp.io/app/#/shared/8P4BcrrHNx























 
 

ಅಶೋಕ್‌ ಆಕ್ರೋಶ

ಪಾಕ್‌ ಮಾಧ್ಯಮಗಳಲ್ಲಿ ಸಿದ್ದರಾಮಯ್ಯನವರ ಹೇಳಿಕೆ ಪ್ರಸಾರವಾದ ಬೆನ್ನಲ್ಲೇ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ.
ಪಾಕಿಸ್ಥಾನ ರತ್ನ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ಥಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ತಮಗೆ ಅಭಿನಂದನೆಗಳು. ಮುಂದೆಂದಾದರೂ ತಾವು ಪಾಕಿಸ್ಥಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರಂಟಿ ಎಂದಿದ್ದಾರೆ.

ಪಾಕಿಸ್ಥಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಪಾಕಿಸ್ಥಾನ ಸರ್ಕಾರ ತಮಗೆ ಅಲ್ಲಿನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ನಿಶಾನ್-ಎ-ಪಾಕಿಸ್ಥಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ. ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಎದುರಿಸುತ್ತಿರುವಾಗ, ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವಾಗ ಈ ರೀತಿ ಶತ್ರುರಾಷ್ಟ್ರದ ಕೈಗೊಂಬೆಯಂತೆ ವರ್ತಿಸುತ್ತಿದ್ದೀರಲ್ಲ, ನಿಮ್ಮಂತಹವರು ಸಾರ್ವಜನಿಕ ಬದುಕಿನಲ್ಲಿ ಇರುವುದೇ ನಮ್ಮ ದೇಶದ ಅತ್ಯಂತ ದೊಡ್ಡ ದುರಂತ ಎಂದಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top