ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ನಂತರ ಕರ್ನಾಟಕ ಕರಾವಳಿಯಲ್ಲಿ ಕರಾವಳಿ ಕಾವಲು ಪೊಲೀಸರ ಕಟ್ಟೆಚ್ಚರ ವಹಿಸಿದೆ.
ಕರಾವಳಿ ಮೂಲಕ ಭಯೋತ್ಪಾದಕ ಚಟುವಟಿಕೆ ಸಾಧ್ಯತೆಯ ಅನುಮಾನದ ಕಾರಣ ಕರಾವಳಿ ಕಾವಲು ಪೊಲೀಸರು ಕಣ್ಗಾವಲು ಹೆಚ್ಚಿಸಿದ್ದಾರೆ. ಸಮುದ್ರ ಮಾರ್ಗದ ಮೂಲಕ ಶತ್ರುಗಳು ಒಳ ನುಗ್ಗದಂತೆ ತಡೆಯಲು ಬೋಟ್ಗಳ ತಪಾಸಣೆ ತೀವ್ರಗೊಳಿಸಲಾಗಿದೆ.
ಉಡುಪಿ ಕರಾವಳಿ ಪೊಲೀಸ್ ಎಸ್. ಪಿ ಮಿಥುನ್ ಸೂಚನೆಯ ನಂತರ ಪೊಲೀಸರು ತಪಾಸಣೆ ಹೆಚ್ಚಿಸಿದ್ದಾರೆ. ಉಡುಪಿ ಜಿಲ್ಲೆಯ ಗಂಗೊಳ್ಳಿ ಕರಾವಳಿ ಪೊಲೀಸರಿಂದ ಆಳ ಸಮುದ್ರದಲ್ಲಿ ಗಸ್ತು ಕಾರ್ಯಚರಣೆ ಆರಂಭಿಸಲಾಗಿದೆ. ಶಸ್ತ್ರಸನ್ನದ್ಧರಾಗಿ ಕರಾವಳಿ ಕಾವಲು ಪೊಲೀಸರು ಕಾರ್ಯಚರಣೆ ನಡೆಸುತ್ತಿದ್ದಾರೆ.