ಪುತ್ತೂರು: ಪಡ್ನೂರು ಗ್ರಾಮದ ಮತಾವು ಮನೆಯ ದಿ. ಹರೀಶ ಗೌಡ ಮತ್ತು ಜಯಂತಿ ದಂಪತಿಯ ಹಿರಿಯ ಪುತ್ರ ಭರತ್ ಮತಾವು ನಿನ್ನೆ ರಾತ್ರಿ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದರು.
ಭರತ್ ಅವರಿಗೆ ಸುಮಾರು 46 ವರ್ಷ ವಯಸ್ಸಾಗಿದ್ದು ಬೆಂಗಳೂರಿನಲ್ಲಿ ಸಿವಿಲ್ ಬಿಲ್ದರ್ ಆಗಿ ಸ್ವಯಂವೃತ್ತಿ ನಿರತರಾಗಿದ್ದರು.
ಮೇಲೊಬ್ಬ ಮಾಯಾವಿ – ಪುತ್ತೂರು ಭರತ್
ಸಿನಿಮಾ ರಂಗದಲ್ಲೂ ಸಕ್ರಿಯರಾಗಿದ್ದ ಅವರು ‘ಮೇಲೊಬ್ಬ ಮಾಯಾವಿ’ ಎಂಬ ಸಿನಿಮಾವನ್ನು ನಿರ್ಮಾಣ ಮಾಡಿ ಹೆಸರು ಮಾಡಿದ್ದರು. ಅಲ್ಲಿ ‘ಪುತ್ತೂರು ಭರತ್’ ಎಂದೇ ಜನಪ್ರಿಯರಾಗಿದ್ದರು. ಪುತ್ತೂರಿನ ಮಾಡಾವು ಬಳಿಯಲ್ಲೂ ಚಿತ್ರೀಕರಣಗೊಂಡಿದ್ದ ಆ ಚಿತ್ರ ಪುತ್ತೂರಿನ ಚಿತ್ರಮಂದಿರದಲ್ಲೂ ಪ್ರದರ್ಶನ ಕಂಡಿತ್ತು.
ಕಂಬಳ ಪ್ರೇಮಿ
ಭರತ್ ಅವರು ಬೆಂಗಳೂರು ಮತ್ತು ಪುತ್ತೂರು ಕಂಬಳ ಕೂಟಗಳ ಸದಸ್ಯರೂ ಆಗಿದ್ದು ಜನಾನುರಾಗಿಯಾಗಿದ್ದರು.
ಮೃತ ಭರತ್ ಅವರು ಅಮ್ಮ, ಪತ್ನಿ ರವಿಕಲಾ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಾದ ಮಗ ನಿಹಾರ್ ಮತ್ತು ಮಗಳು ಹಂಸಿಕಾ, ತಮ್ಮ ಆದರ್ಶ, ತಂಗಿ ಸೌಮ್ಯಾ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇಂದು ಮತಾವು ಮನೆಯಲ್ಲಿ ಅಂತ್ಯಕ್ರಿಯೆ
ಈಗ ಬೆಳಿಗ್ಗೆ ಗಂಟೆ 8ರ ಸುಮಾರಿಗೆ ಆಗಮಿಸಲಿರುವ ಭರತ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಮತಾವು ಮನೆಯಲ್ಲಿ ನಡೆಯಲಿದೆ.