ಪುತ್ತೂರು: ಮುಂಡೂರು ಗ್ರಾಮದ ಬದಿಯಡ್ಕ ದಲ್ಲಿರುವ ಸರಕಾರಿ ಗೋಮಾಳ ಜಾಗವನ್ನು ಗೋಶಾಲೆ ಮಾಡಲು ಪುತ್ತೂರಿನ ಪ್ರತಿಷ್ಠಿತ ಸಮಾಜ ಸೇವಾ ಟ್ರಸ್ಟ್ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಹಸ್ತಾಂತರ ಮಾಡಬೇಕೆಂದು ಪುತ್ತಿಲ ಪರಿವಾರ ಟ್ರಸ್ಟ್ ಸಹಾಯಕ ಆಯುಕ್ತರಿಗೆ ಬುಧವಾರ ಮನವಿ ನೀಡಿತು.
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಮನವಿ ನೀಡಿದರು.
ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ, ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿ ಮಠ, ಕೋಶಾಧಿಕಾರಿ ಗಣೇಶ ಭಟ್ ಮಕರಂದ, ನಿರ್ದೇಶಕರಾದ ರಾಜು ಶೆಟ್ಟಿ, ಜನಾರ್ದನ ಕುರೆ ಮಜಲು, ಬಿಜೆಪಿ ಆರ್ಯಪು ಶಕ್ತಿಕೇಂದ್ರ ಅಧ್ಯಕ್ಷ ಪ್ರಜ್ವಲ್ ಘಾಟೆ, ರೂಪೇಶ್ ಪುತ್ತೂರು, ಪ್ರಕಾಶ್ ಚಿಕ್ಕಮುಡ್ನೂರು, ಬಾಲಚಂದ್ರ ಸೊರಕೆ, ಮನಿಷ್ ಕುಲಾಲ್ ಹಾಗೂ ಹಲವಾರು ಟ್ರಸ್ಟಿನ ಪದಾಧಿಕಾರಿಗಳು ಉಪಸ್ಥಿತರದ್ದರು.