ಮಂಗಳೂರು : ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಸುಹಾಸ್ ಶೆಟ್ಟಿ ಹತ್ಯೆಯ ವಿಷಯನುಸಾರವಾಗಿ ಸಾಕಷ್ಟು ವಿಚಾರಗಳು ಹಬ್ಬುತ್ತಲೇ ಇವೆ. ಇದೀಗ ಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸಂದೇಶವೊಂದು ವೈರಲ್ ಆಗಿದ್ದು, ಸಂದೇಶ ರವಾನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
*ಮಂಗಳೂರು ಮುಸ್ಲಿಂ ಯುವಸೇನೆ’ ಎಂಬ ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದ ಆರೋಪಿ ವಿಟ್ಲದ ಅನಾಸ್ ನನ್ನು ವಿಚಾರಣೆ ನಡೆಸಲಾಗಿದ್ದು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಈ ಬಗ್ಗೆ ಮೂಡುಬಿದಿರೆ ರಾಷೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆಗಾಗಿ ಮಂಗಳೂರು ನಗರ ಸೆನ್ ಅಪರಾಧ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.