ಭಾರತ-ಪಾಕ್‍ ನಡುವಿನ ಕದನ ವಿರಾಮ : ಬಂದ್ ಆಗಿದ್ದ 32 ವಿಮಾನ ನಿಲ್ದಾಣ ಕಾರ್ಯಾರಂಭಿಸುವಂತೆ ವಾಯುಪಡೆಯಿಂದ ಸೂಚನೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ವಿವಿಧ ರಾಜ್ಯಗಳ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭ ಮಾಡುವಂತೆ ವಾಯುಪಡೆ ಸೂಚನೆ ನೀಡಿದೆ.

32 ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಭಾರತೀಯ ವಾಯುಪಡೆ ಅಧಿಕಾರಿಗಳು ಸೂಚನೆ ನೀಡಿದ ಬೆನ್ನಲ್ಲೇ ಭಾರತೀಯ ವಿಮಾನ ನಿಲ್ದಾಣ ಭಾರತ ಪಾಕ್ ನಡುವಿನ ಸಂಘರ್ಷ ತೀವ್ರಗೊಂಡಿತ್ತು. ಈ ಹಿನ್ನೆಲೆ ಸುರಕ್ಷತಾ ಕ್ರಮವಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು 32 ಏರ್‌ ಪೋರ್ಟ್‌ಗಳನ್ನು ಮೇ 15ರ ವರೆಗೆ ತಾತ್ಕಾಲಿಕವಾಗಿ ಬಂದ್ ಮಾಡುವಂತೆ ಸೂಚನೆ ನೀಡಿತ್ತು. ಹೀಗಾಗಿ ದೇಶದ ಪಶ್ಚಿಮ ಮತ್ತು ಉತ್ತರ ಭಾಗಗಳಲ್ಲಿ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭಿಸಲಿದೆ.

ಪಂಜಾಬ್‌ನ ಅಮೃತಸರ, ಲುಧಿಯಾನ, ಪಟಿಯಾಲ, ಬಟಿಂಡಾ, ಹಲ್ವಾರಾ ಮತ್ತು ಪಠಾಣ್‌ ಕೋಟ್, ಹಿಮಾಚಲ ಪ್ರದೇಶದ ಭುಂತರ್‌, ಶಿಮ್ಲಾ ಮತ್ತು ಕಾಂಗ್ರಾ ಗಗ್ಗಲ್, ಚಂಡೀಗಢ, ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಮತ್ತು ಜಮ್ಮು ಲಡಾಖ್‌ನ ಲೇಹ್, ರಾಜಸ್ಥಾನದ ಕಿಶೆಂಗಢ, ಜೈಸರ್, ಜೋದ್‌ಪುರ ಮತ್ತು ಬಿಕಾನೇರ್ ಮತ್ತು ಗುಜರಾತ್‌ನ ಮುಂದ್ರ, ಜಾಮ್‌ನಗರ ಸೇರಿದಂತೆ ಹಲವು ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿತ್ತು. ಆದರೆ ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆಯಾಗುತ್ತಿದ್ದಂತೆ ಏರ್‌ಪೋರ್ಟ್‌ಗಳನ್ನು ಕಾರ್ಯಾಚರಣೆ ಪುನರಾರಂಭಿಸುವಂತೆ ಭಾರತೀಯ ವಾಯುಸೇನೆ ಸೂಚಿಸಿದೆ.

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top