ಬಂಟ್ವಾಳ: ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾ ಪ್ರವಾಸದಲ್ಲಿರುವ ಸಂದರ್ಭದಲ್ಲಿಯೇ ಪಾಣೆಮಂಗಳೂರಿನ ಅಕ್ಕರಂಗಡಿಯಲ್ಲಿ ಚಾಕು ಇರಿತ ನಡೆದಿದೆ.
ಪೈಂಟಿಂಗ್ ವೃತ್ತಿಯಲ್ಲಿದ್ದ ಹಮೀದ್ ಯಾನೆ ಎಂಬಾತನಿಗೆ ಇರಿತವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಶುಕ್ರವಾರ ರಾತ್ರಿ 9ರ ಸುಮಾರಿಗೆ ಬಿ.ಸಿ. ರೋಡ್ ಬಳಿಯ ಹಳೆಯ ಸೇತುವೆ ಬಳಿಯಲ್ಲಿ ಹಮೀದ್ ತನ್ನ ರಿಕ್ಷಾದಲ್ಲಿ ಕುಳಿತುಕೊಂಡಿದ್ದಾಗ ಅಲ್ಲಿಗೆ ಬಂದ ಕಿರಾತಕರು ಆತನ ಕೈಗೆ ಇರಿದಿದ್ದರು. ಮುಖ ಮುಚ್ಚಿಕೊಂಡಿದ್ದ ದಾಳಿಕೋರರ ಗುರುತು ಪತ್ತೆ ಸಾಧ್ಯವಾಗಿಲ್ಲ. ಪೊಲೀಸರ ಪ್ರಾಥಮಿಕ ತನಿಖೆಯ ಬಳಿಕ ಇದು ಒಂದೇ ಕೋಮಿನವರ ನಡುವೆ ನಡೆದ ಘಟನೆಯಾಗಿದ್ದು ಕಾರಣ ತಿಳಿದುಬಂದಿಲ್ಲ ಎಂಬ ಮಾಹಿತಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ
ಈ ಹಿಂದೆ
ಮುಖ್ಯಮಂತ್ರಿಗಳು ಪ್ರವಾಸದಲ್ಲಿದ್ದಾಗಲೇ ಕೆಲವು ದುರ್ಘಟನೆಗಳು ನಡೆದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಬಸವರಾಜ್ ಬೊಮ್ಮಾಯಿ ಅವರು ಬಂದಿದ್ದಾಗ ಫಾಜಿಲ್ ಕೊಲೆ ನಡೆದಿದ್ದರೆ ಕಳೆದ ಬಾರಿ ಸಿದ್ದರಾಮಯ್ಯನವರು ಬಂದಿದ್ದಾಗ ಕೋಟೆಕಾರ್ ಬ್ಯಾಂಕ್ ದರೋಡೆ ನಡೆದಿತ್ತು.