ಕುಮಟಾ – ಶಿರಸಿ ಸಂಪರ್ಕ ಕಡಿತ
ಕಾರವಾರ: ಕಳೆದ ಕೆಳ ದಿನಗಳಿಂದ ಅಬ್ಬರಿಸುತ್ತಿರುವ ಮಳೆಗೆ ದೇವಿಮನೆ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿಯೇ ಕೊಚ್ಚಿ ಹೋಗಿದ್ದು ಕುಮಟಾ–ಶಿರಸಿ ಸಂಪರ್ಕ ಕಡಿತಗೊಂಡಿದೆ. ಕಳೆದ ಒಂದು ವರ್ಷದಿಂದ 766ಇ ಹೆದ್ದಾರಿ ಕಾಮಗಾರಿ ನಡೆಯುತಿತ್ತು. ಶುಕ್ರವಾರ ಸುರಿದ ಭಾರಿ ಮಳೆಗೆ ರಸ್ತೆಯೇ ಕೊಚ್ಚಿಹೋಗಿದೆ.
ಅಬ್ಬರದ ಮಳೆಯಿಂದ ಬೆಣ್ಣೆಹೊಳೆ ಹಳ್ಳದ ನೀರು ಹರಿದು ಬಂದು ಹೆದ್ದಾರಿಯ ಬದಿಯಲ್ಲಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆಯೂ ಸಂಪೂರ್ಣ ನಾಶವಾಗಿದೆ.
ತಾತ್ಕಾಲಿಕ ರಸ್ತೆ ಕೊಚ್ಚಿಹೋಗಿದ್ದರಿಂದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಕುಮಟಾ ಮೂಲಕ ದೇವಿಮನೆ ಘಟ್ಟ ಭಾಗದಲ್ಲಿ ಸಂಚಾರ ಬಂದ್ ಮಾಡಿ ಆದೇಶ ಹೊರಡಿಸಿದ್ದಾರೆ.