ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ವತಿಯಿಂದ ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ ಮೇ.೨೭ ರಂದು ನಡೆಯಿತು.

J.C ತರಬೇತುದಾರರು, ರಾಮ ಕುಂಜ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ಭಟ್, ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಕುಮಾರಸ್ವಾಮಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಂಕೀರ್ಥ್ ಹೆಬ್ಬಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು.
ಮಹಾವಿದ್ಯಾಲಯದ ಪ್ರಾಂಶುಪಾಲರಾದ, ಡಾ. ದಿನೇಶ ಪಿ .ಟಿ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ನ ಸಂಯೋಜಕರಾದ ಆರತಿ ಕೆ. ಸ್ವಾಗತಿಸಿ, ವಿದ್ಯಾರ್ಥಿ ಪ್ರತಿನಿಧಿ ಯಶಸ್ವಿನಿ ವಂದಿಸಿದರು. ಕಲ್ಪನಾ ಕಾರ್ಯಕ್ರಮ ನಿರೂಪಿಸಿದರು. ಒಟ್ಟಾರೆ 130 ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ.