ವಿಟ್ಲ: ಅಡ್ಡಹೋಳೆ- ಬಿ ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯ ಅಂಡರ್ ಪಾಸ್ ರಸ್ತೆ ಸಂಚಾರಕ್ಕೆ ಮುಕ್ತಗೊಂಡ ಬೆನ್ನಲ್ಲೇ ಮಾಣಿ ಹೈಸ್ಕೂಲ್ ಬಳಿ ಸರ್ವಿಸ್ ರಸ್ತೆಗೆ ಗೋಡೆ ಕುಸಿದ ಪರಿಣಾಮ ಮಣ್ಣು ರಸ್ತೆಗೆ ಬಿದ್ದಿದೆ.
ಈ ಭಾಗದಲ್ಲಿ ತಡೆಗೋಡೆ ನಿರ್ಮಿಸದೇ ಇದ್ದದ್ದರಿಂದ ನಿರಂತರ ಸುರಿಯುತ್ತಿರುವ ಮಳೆಗೆ ಗುಡ್ಡ ಕುಸಿದು ಮಣ್ಣು ರಸ್ತೆಗೆ ಬಿದ್ದಿದೆ.
ಸರಿಯಾಗಿ ಕಾಮಗಾರಿ ನಿರ್ವಹಿಸದೇ ಇದ್ದುದರಿಂದ ಅಲ್ಲಲ್ಲಿ ಈ ರೀತಿಯ ತೊಂದರೆಗಳು ಉಂಟಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.