ಸಿಗರೇಟು ಮತ್ತು ತಂಬಾಕು ಉತ್ಪನ್ನ ಬಳಕೆಯ ಹೊಸ ಕಾನೂನು ಜಾರಿ
ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಪಾನ್ ಪರಾಗ್, ತಂಬಾಕು ಸೇರಿದಂತೆ ಇನ್ನಿತರ ಪದಾರ್ಥಗಳನ್ನು ತಿಂದು ಉಗುಳುವುದನ್ನು ನಿಷೇಧಿಸಿ ರಾಜ್ಯ ಸರಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ತಿಂದು ಉಗುಳಿದರೆ 1 ಸಾವಿರ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ.
ಈ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ‘ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ಮಸೂದೆ-2024’ಕ್ಕೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.
ಇಪ್ಪತ್ತೊಂದು ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೀಡಿ-ಸಿಗರೇಟು ಮತ್ತು ತಂಬಾಕಿನ ಉತ್ಪನ್ನಗಳ ಮಾರಾಟವನ್ನು ಈ ಕಾಯ್ದೆ ನಿಷೇಧಿಸುತ್ತದೆ. ಉಲ್ಲಂಘಿಸಿದವರಿಗೆ 1 ಸಾವಿರ ರೂ. ದಂಡ ದಂಡ ವಿಧಿಸಬಹುದಾಗಿದೆ. ಉಪಹಾರ ಗೃಹ, ಪಬ್, ಬಾರ್ ಅಥವಾ ರೆಸ್ಟೋರೆಂಟ್ಗಳಲ್ಲಿ ಹುಕ್ಕಾ ಸೇವನೆಗೆ ಅವಕಾಶ ನೀಡುವುದನ್ನೂ ಈ ಕಾಯ್ದೆ ನಿಷೇಧಿಸುತ್ತದೆ. ಈ ನಿಷೇಧವನ್ನು ಉಲ್ಲಂಘಿಸಿದವರಿಗ 50 ಸಾವಿರ ರೂ.ನಿಂದ 1 ಲಕ್ಷ ರೂ.ಗಳವರೆಗೆ ದಂಡ ಮತ್ತು 1 ವರ್ಷದಿಂದ ಮೂರು ವರ್ಷಗಳವರೆಗೆ ಕಾರಾಗೃಹ ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
j5hsob