ಕೋಮು ಪ್ರಚೋದನಕಾರಿ ಭಾಷಣ : ಡಾ.ಕಲ್ಲಡ್ಕ ಪ್ರಭಾಕರ ಭಟ್‍ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ಮಂಗಳೂರಿನಲ್ಲಿ ಇತ್ತೀಚೆಗೆ ಕೊಲೆಯಾದ ಯುವಕನ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ಥ್ಯ ಕದಡುವ ಮತ್ತು ಕೋಮು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ಯ ಪ್ಯಾಲೇಸ್ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕ‌ರ್ ಭಟ್ ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಸುಮಾರು 300 ಜನರನ್ನು ಉದ್ದೇಶಿಸಿ ಅವರು ಮಾತನಾಡಿ. ಸಮಾಜದಲ್ಲಿ ಅಶಾಂತಿ ಮೂಡಿಸುವ ಹಾಗೂ ವಿವಿಧ ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟುಮಾಡುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top