ಪುತ್ತೂರು: ಬಕ್ರೀದ್ ಮತ್ತಿತರ ಸಂದರ್ಭದಲ್ಲಿ ಗೋವಿನ ಕುರ್ಬಾನಿ ಆಗದಂತೆ ತಡೆಯುವುದು ಹಾಗೂ ಹಿಂಸಾತ್ಮಕವಾಗಿ ಗೋವು ಸಾಗಾಟ ಮಾಡುವುದರ ಕುರಿತು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಹಾಗೂ ಕಾರ್ಯಕರ್ತರ ಮನೆಗೆ ರಾತ್ರಿ ವೇಳೆ ಪೊಲೀಸರು ತೆರಳಿ ಸೆಲ್ಪಿ ತೆಗೆಯುವ ಮೂಲಕ ಭಯ ಉಂಟು ಮಾಡುವ ಕಾರ್ಯಕ್ಕೆ ಕಡಿವಾಣ ಹಾಕಬೇಕು ಎಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಆಗ್ರಹಿಸಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಪೊಲೀಸರು ರಾತ್ರಿ ವೇಳೆ ಕಾರ್ಯಕರ್ತರ ಮನೆಗಳಿಗೆ ತೆರಳಿ ಮನೆಯವರನ್ನು ಹೊರಗೆ ಕರೆದು ಫೋಟೊ ತೆಗೆದು ಜಿಪಿಎಸ್ ಮೂಲಕ ಬಿಡುತ್ತಿದ್ದಾರೆ. ಈ ರೀತಿ ಮಧ್ಯರಾತ್ರಿ ಮನೆಗೆ ತೆರಳಿ ಮನೆಯವರನ್ನು ಭಯದ ವಾತಾವರಣ ಉಂಟು ಮಾಡುವುದಕ್ಕೆ ಕಾನೂನಿನಲ್ಲಿ ಯಾವುದೇ ಅವಕಾಶ ಇಲ್ಲ. ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆ ವೇಳೆ ಪೊಲೀಸರು ಮನೆಗೆ ತೆರಳುವಂತಿಲ್ಲ. ತಕ್ಷಣ ಕಾರ್ಯವನ್ನು ನಿಲ್ಲಿಸಬೇಕು. ಈ ಸಂದರ್ಭದಲ್ಲಿ ಏನಾದರೂ ಹೆಚ್ಚುಕಡಿಮೆಯಾದರೆ ಅದಕ್ಕೆ ಪೊಲೀಸ್ ಇಲಾಖೆಯೇ ನೇರ ಹೊಣೆಯಾಗಲಿದೆ ಎಂದು ಅವರು ತಿಳಿಸಿದ ಅವರು, ಮಧ್ಯರಾತ್ರಿ ಮನೆಗೆ ಆಗಮಿಸುವ ಪೊಲೀಸರು, ಮನೆಯಿಂದ ಹೊರಗೆ ಕರೆದು ಸೆಲ್ಪಿ ತೆಗೆಯುತ್ತಿದ್ದಾರೆ. ಕಾನೂನು ಪ್ರಕಾರ, ಈ ರೀತಿ ಮನೆಗಳಿಗೆ ತೆರಳಿ ಸೆಲ್ಪಿ ತೆಗೆಯುತ್ತಿದ್ದಾರೆ. ಇದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದನ್ವಯ ಬಕ್ರೀದ್ ಮತ್ತಿತರ
ಹಬ್ಬ ಸಂಧರ್ಭಗಳಲ್ಲಿ, ಜಾನುವಾರು ಮತ್ತು ಇತರೆ ಪ್ರಾಣಿಗಳ ಹತ್ಯೆ ನಿಷೇಧವಿದ್ದು ಅದನ್ನು ಕಟ್ಟು ನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲು ಮನವಿ ಮಾಡಲಿದ್ದೇವೆ ಎಂದು ತಿಳಿಸಿದರು. ರಾಜ್ಯದಲ್ಲಿ ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ (ಯಾವುದೇ ರೀತಿಯ ಹತ್ಯೆ) ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ. ಕುರ್ಬಾನಿ ಕೊಟ್ಟ ಸ್ಥಳವನ್ನು ಸರಕಾರ ಮುಟ್ಟುಗೋಲು ಮಾಡಲು ಅವಕಾಶವಿದೆ. ರಾಜ್ಯದಲ್ಲಿ ಪ್ರಾಣಿ ಬಲಿ ನಿಷೇಧ ಕಾಯಿದೆ 1959 ತಿದ್ದುಪಡಿ 1975 ಇದರ ಪ್ರಕಾರವೂ ಜಾನುವಾರು ಬಲಿ (ಕುರ್ಬಾನಿ ) ನಿಷೇಧವಿರುತ್ತದೆ ಎಂದರು. WP (Civil) 309:2003 23 30.01.2014 0 3 5 2 06.01.2009 WP 1443/2008 ಹಾಗೂ ಕಾಲ ಕಾಲಕ್ಕೆ ಸರಕಾರ ವಿವಿಧ ಆದೇಶಗಳಂತೆ ರಾಜ್ಯದಲ್ಲಿ ಜಾನುವಾರುಗಳ ಕುರ್ಬಾನಿ ಕಟ್ಟು ನಿಟ್ಟಾಗಿ ತಡೆಯಲು ತಾವುಗಳು ಕ್ರಮಕೈಗೊಳ್ಳುವಂತೆ ನಾವು ಮನವಿ ಮಾಡಲಿದ್ದೇವೆ ಎಂದು ತಿಳಿಸಿದರು.
ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಅಕ್ರಮ ಜಾನುವಾರ ಸಾಗಾಟವಾಗದಂತೆ ನಾಕಾಬಂದಿ ಹಾಕಬೇಕು. ಕಿವಿಯೋಲೆ ಇಲ್ಲದ ಜಾನುವಾರುಗಳನ್ನು ಸಾರ್ವಜನಿಕ ಜಾಗದಲ್ಲಿ ಶೇಖರಿಸಿ ಇಡದಂತೆ, ಮೇಯಲು ಬಿಡದಂತೆ, ಸೂರ್ಯಾಸ್ತದಿಂದ ಸೂರ್ಯೋದಯವರೆಗೆ ಕಾಲ್ನಡಿಗೆಯಲ್ಲಿ ಜಾನುವಾರು ಸಾಗಾಟ ನಿಷೇಧವಿದ್ದು ಹಾಗಾಗಿ ಈ ಸಮಯದಲ್ಲಿ ಸಾಗಾಟ ಮಾಡದಂತೆ ಸಾರ್ವಜನಿಕರಿಗೆ ಎಚ್ಚರಿಕೆಯನ್ನು ಮಾಧ್ಯಮದ ಮೂಲಕ ಪ್ರಚಾರ ಮಾಡಬೇಕು. ಅದನ್ನು ಉಲ್ಲಂಘಿಸಿ ಕಿವಿಯೋಲೆ ಇಲ್ಲದೆ ಶೇಖರಿಸಿಟ್ಟ ಮೇಯಲು ಬಿಟ್ಟ ಜಾನುವಾರುಗಳನ್ನು ವಶಪಡಿಸಿ, ಜಾನುವಾರು ನಿಷೇಧ ಕಾಯಿದೆ 2020 ರಂತೆ ಪ್ರಕರಣ ದಾಖಲಿಸಬೇಕು. ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಿಂದೆ ನಡೆದ ಅಕ್ರಮ ಕಸಾಯಿಖಾನೆ ಜಾಗಗಳನ್ನು ನಿಗಾ ಇಡುತ್ತಾ ಪ್ರಾರ್ಥನಾ ಮಂದಿರಗಳಲ್ಲಿಯೂ ಜಾನುವಾರು ಶೇಖರಿಸಿ ಇಡದಂತೆ ನಿಗಾ ಇಡಲು ಸೂಚಿಸಬೇಕು ಎಂದರು ಕಾರ್ಯದರ್ಶಿ ನವೀನ್ ನೆರಿಯ ಮಾತನಾಡಿ, ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಅವರ ಆದೇಶದಂತೆ ಮನೆಗಳಿಗೆ ತೆರಳುತ್ತಿದ್ದಾರೆ. ಇದರಿಂದ ಏನಾದರೂ ಅನಾಹುತಗಳಾದರೆ ಅದಕ್ಕೆ ಪೊಲೀಸ್ ಇಲಾಖೆಯೇ ನೇರ ಹೊಣೆ ಎಂದರು.
ಕೋಶಾಧಿಕಾರಿ ಮಾಧವ ಪೂಜಾರಿ ಮಾತನಾಡಿ, ಕಾನೂನಿನಡಿ ಈ ರೀತಿ ಮನೆಗಳಿಗೆ ತೆರಳಲು ಅವಕಾಶ ಇಲ್ಲ. ಹಾಗೊಂದು ವೇಳೆ ಸಂದೇಹಗಳಿದ್ದರೆ ನೋಟಿಸ್ ನೀಡಿ ಕರೆಯಲಿ. ಇದನ್ನು ಹೈಕೋರ್ಟಿನಲ್ಲಿ ಪಿಐಎಲ್ ಹಾಕಿ ಪ್ರಶ್ನಿಸಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಬಜರಂಗದಳ ಸಹಸಂಯೋಜಕ್ ಸಂತೋಷ್ ಉಪ್ಪಿನಂಗಡಿ ಉಪಸ್ಥಿತರಿದ್ದರು.